Advertisement

Ram Mandir: ಅಯೋಧ್ಯೆಗೆ ತೆರಳುವ ಭಕ್ತರಿಗೆ BJP ಕಾರ್ಯಕರ್ತರ ಸಹಾಯ

12:36 AM Jan 03, 2024 | Team Udayavani |

ಹೊಸದಿಲ್ಲಿ: ಜ.22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಅನಂತರ ಜ. 25ರಿಂದ ಮಾ.25ರವರೆಗೆ ವಿವಿಧ ಭಾಗಗಳಿಂದ ಅಯೋಧ್ಯೆಗೆ ಭೇಟಿ ನೀಡಲು ಬಯಸುವ ಭಕ್ತರಿಗೆ ಬಿಜೆಪಿ ಕಾರ್ಯಕರ್ತರು ಸಹಾಯ ಮಾಡಲಿದ್ದಾರೆ.

Advertisement

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷ ತೆಯಲ್ಲಿ ಬಿಜೆಪಿಯ ಉನ್ನತ ನಾಯಕರು ಭಾಗವಹಿಸಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಇದೇ ವೇಳೆ ಮುಂದಿನ ಲೋಕಸಭೆ ಚುನಾವಣೆ ಗಾಗಿ ಪಕ್ಷದ ಸಿದ್ಧತೆ, ತಂತ್ರ ಗಾರಿಕೆ ಕುರಿತು ಚರ್ಚಿಸಲಾಯಿತು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್‌ ಬನ್ಸಾಲ್‌, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್‌, ಅಶ್ವಿ‌ನಿ ವೈಷ್ಣವ್‌, ಮನ್‌ಸುಖ್‌ ಮಾಂಡವೀಯ, ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಸೇರಿದಂತೆ ಹಲವು ಬಿಜೆಪಿ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಮ ಮಂದಿರಕ್ಕೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮದಲ್ಲೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಲ್ಲದೇ ಜ.22ರಂದು ಸಮೀಪದ ದೇಗುಲ ಗಳಿಗೆ ಭೇಟಿ ನೀಡುವಂತೆ, ಮನೆಗಳಲ್ಲಿ ದೀಪಗಳನ್ನು ಬೆಳಗುವಂತೆ ಪ್ರತೀ ಮನೆ-ಮನೆಗೆ ತೆರಳಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಮನವಿ ಮಾಡಲಿದ್ದಾರೆಎಂದು ಬಿಜೆಪಿ ನಾಯಕರು ವಿವರಿಸಿದ್ದಾರೆ.

ಹಲವು ಕ್ಷೇತ್ರಗಳ ಕ್ಲಸ್ಟರ್‌: ಇದೇ ವೇಳೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಲವು ಲೋಕಸಭಾ ಕ್ಷೇತ್ರಗಳನ್ನು ಸೇರಿಸಿ ಒಂದು ಕ್ಲಸ್ಟರ್‌ ಮಾಡುವ ಬಗ್ಗೆ ಪರಾಮರ್ಶೆ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next