Advertisement

DDC ಚುನಾವಣೆಯ  ಪ್ರಚಾರದ  ರ‍್ಯಾಲಿ ವೇಳೆ ಮಗುಚಿದ ದೋಣಿ

08:36 PM Dec 13, 2020 | Adarsha |

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಡಿಡಿಸಿ ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ  ವೇಳೆ ಶ್ರೀನಗರದಲ್ಲಿರುವ ದಾಲ್ ಸರೋವರದಲ್ಲಿ ದೋಣಿ ಮಗುಚಿದ ಪರಿಣಾಮ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಹಲವು  ಬಿಜೆಪಿ ಕಾರ್ಯಕರ್ತರು ಹಾಗೂ ಪತ್ರಿಕಾ ಪ್ರತಿನಿಧಿಗಳು ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ,

Advertisement

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಬಿಜೆಪಿ ವತಿಯಿಂದ ಜಿಲ್ಲಾ ಅಭಿವೃದ್ಧಿ ಮಡಳಿ (DDC) ಚುನಾವಣೆಯ    ಉಸ್ತುವಾರಿಯನ್ನು ವಹಿಸಿಕೊಂಡಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ  ದಾಲ್ ಲೇಕ್ ರ‍್ಯಾಲಿ ಕೈಗೊಂಡಿದ್ದರು.

ಇದನ್ನೂ ಓದಿ:ರಸ್ತೆ ಮಧ್ಯೆ ನಿಂತ ಸಲಗ: ಟ್ರಾಫಿಕ್‌ ಜಾಮ್‌

ದೋಣಿಯಲ್ಲಿ ಬಿ ಜೆ ಪಿ ಪಕ್ಟದ ಕಾರ್ಯಕರ್ತರು ಹಾಗೂ ನಾಯಕರುಗಳನ್ನು ಒಳಗೊಂಡಂತೆ ಪತ್ರಿಕಾ ಪ್ರತಿನಿಧಿಗಳು ಪ್ರಯಾಣಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಿಯರು, SDRF ಸಿಬ್ಬಂದಿ ಸೇರಿದಂತೆ ಪೊಲೀಸರು ಆಗಮಿಸಿ ನೀರಿನಲ್ಲಿ ಮುಳುಗಿರುವವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ .

ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ದಡ ತಲುಪುವ ವೇಳೆ ದೋಣಿ ಮಗುಚಿದ ಪರಿಣಾಮ ಈ ಘಟನೆ ನಡೆದಿದೆ. ದೋಣಿಯಲ್ಲಿ ಹಲವಾರು ಮಾಧ್ಯಮ ಮಿತ್ರರಿದ್ದರು , ಅದೃಷ್ಟವಶಾತ್ ಯಾರೊಬ್ಬರಿಗೂ ಯಾವುದೇ ಅಪಾಯವಾಗಿಲ್ಲ. ಮತ್ತು ನಾವು ಕೈಗೊಂಡ ದಾಲ್ ಲೇಕ್ ರ‍್ಯಾಲಿ ಯಶಸ್ವಿಯಾಗಿದೆ ಎಂದು ಶಹನವಾಜ್ ಹುಸೇನ್ ಮಾದ್ಯಮಕ್ಕೆ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next