Advertisement

ಬಿಜೆಪಿ ಜಯಭೇರಿ: ತಾಲ್ಲೂಕು ಬಿಜೆಪಿ ಮಂಡಲದ ಕಾರ್ಯಕರ್ತರಿಂದ ಸಂಭ್ರಮಾಚರಣೆ

06:31 PM Mar 12, 2022 | Team Udayavani |

ಕೊರಟಗೆರೆ : ಉತ್ತರ ಪ್ರದೇಶ, ಉತ್ತರ ಖಾಂಡ ಹಾಗೂ ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಜಯಬೇರಿ ಬಾರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಬಿಜೆಪಿ ಮಂಡಲದ ಕಾರ್ಯಕರ್ತರು ಪಟ್ಟಣದ ಎಸ್.ಎಸ್.ಆರ್. ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

Advertisement

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಪವನ್‌ಕುಮಾರ್  ಮಾತನಾಡಿ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿರುವುದು ಸಂತಸದ ವಿಚಾರವೆಂದರಲ್ಲದೆ ನಾಲ್ಕು ರಾಜ್ಯಗಳಲ್ಲಿ ಪಕ್ಷವು ಅಧಿಕಾರ ಗದ್ದುಗೆ ಏರುವುದು ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ ಎಂದರು.

ಮುಂಬರುವ 2023 ರ ವಿಧಾನ ಸಭೆ ಚುನಾವಣೆಯಲ್ಲೂ ರಾಜ್ಯದಲ್ಲಿ ಬಿಜೆಪಿ ಪಕ್ಷವು ಮತ್ತೋಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದ್ದು ಕೇಂದ್ರಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ವರ್ಗದ ಜನರ ಅಭ್ಯುದಯಕ್ಕೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರುವ ಹಿನ್ನೆಲೆಯಲ್ಲಿ ಮತದಾರರು ಮತ್ತೋಮ್ಮೆ ಪಕ್ಷವನ್ನು ಕೈಹಿಡಿದಿದ್ದಾರೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗುರುದತ್ತ್, ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರದೀಪ್‌ಕುಮಾರ್, ನಾಮಿನಿ ಸದಸ್ಯರಾದ ಗೋವಿಂದರಾಜು , ರಂಗನಾಥ್, ಪ್ರೇಮ್ ಕುಮಾರ್, ಕಾರ್ಯಕರ್ತರಾದ ಪ್ರಕಾಶ್‌ರೆಡ್ಡಿ, ಹೇಮಲತಾ ಜಗನ್ನಾಥ್, ಪ್ರಸನ್ನಕುಮಾರ್, ಗೋಪಿ, ಸಿದ್ದರಾಜು, ಅಶೋಕ್, ದಯಾನಂದ್, ಬಿ.ಜೆ.ಪಿ. ಕಾರ್ಯಕರ್ತರಾದ ಆರ್.ಪಿ.ರವಿಶಂಕರ್,  ಸೇರಿದಂತೆ ಇನ್ನೂ ಅನೇಕ ಕಾರ್ಯಕರ್ತರು ಹಾಜರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next