Advertisement

ಅಂಡಮಾನ್‌ನಲ್ಲಿ ಬಿಜೆಪಿ ಕಾರ್ಯಾಗಾರ

02:17 AM May 21, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾನಾ ರಾಜ್ಯಗಳಲ್ಲಿ ಚುನಾವಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ರಾಜ್ಯ ಬಿಜೆಪಿಯ ಕೆಲ ನಾಯಕರು ಇದೀಗ ಪಕ್ಷದ ಕೆಲಸದ ಜತೆಗೆ ಪ್ರವಾಸಕ್ಕಾಗಿ ಅಂಡಮಾನ್‌ ನಿಕೋಬಾರ್‌ ದ್ವೀಪಕ್ಕೆ ತೆರಳಿದ್ದಾರೆ.

Advertisement

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ನೇತೃತ್ವದಲ್ಲಿ ಪದಾಧಿಕಾರಿಗಳು ಅಂಡಮಾನ್‌ಗೆ ತೆರಳಿದ್ದಾರೆ. ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುವ ದಿನ ಮತಗಟ್ಟೆಯಲ್ಲಿ ಪಕ್ಷವನ್ನು ಪ್ರತಿನಿಧಿಸುವ ಕಾರ್ಯಕರ್ತರಿಗೆ ಕಾರ್ಯಾಗಾರವೂ ಏರ್ಪಾಡಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಅಂಡಮಾನ್‌ಗೆ ಕುಟುಂಬದೊಂದಿಗೆ ತೆರಳಿದ್ದು, ವೀರ ಸಾವರ್ಕರ್‌ ಅವರನ್ನು ಬಂಧಿಸಿಡಲಾಗಿದ್ದ ಸೆಲ್ಯುಲರ್‌ ಜೈಲು ಸೇರಿ ಇತರೆ ಸ್ಥಳಗಳನ್ನು ವೀಕ್ಷಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಕುರಿತು ಚರ್ಚೆ ನಡೆದಿರುವ ಈ ಸಂದರ್ಭದಲ್ಲಿ ಬಿ.ಎಲ್. ಸಂತೋಷ್‌ ನೇತೃತ್ವದಲ್ಲಿ ಕೆಲವರು ಅಂಡಮಾನ್‌ಗೆ ತೆರಳಿರುವ ಬಗ್ಗೆ ನಾನಾ ರೀತಿಯ ವಿಶ್ಲೇಷಣೆ ಕೇಳಿಬಂದಿತ್ತು. ಆದರೆ ಈ ರೀತಿಯ ವಿಚಾರಗಳನ್ನು ಅಲ್ಲಗಳೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ನಾನಾ ರಾಜ್ಯಗಳಲ್ಲಿ ಚುನಾವಣಾ ಕಾರ್ಯಕ್ಕೆ ತೆರಳಿದ್ದ ಸಹೋದ್ಯೋಗಿಗಳು ಅಂಡಮಾನ್‌ ನಿಕೋಬಾರ್‌ಗೆ ತೆರಳಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ದನಿಗೂಡಿಸಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಕೇರಳ, ತಮಿಳುನಾಡು ಹಾಗೂ ಅಂಡಮಾನ್‌ ನಿಕೋಬಾರ್‌ ಚುನಾವಣೆ ಉಸ್ತುವಾರಿ ಹಿನ್ನೆಲೆಯಲ್ಲೇ ಅಲ್ಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಆಯ್ಕೆ ಹಾಗೂ ಅಂಡಮಾನ್‌ ಭೇಟಿಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next