Advertisement

ಪ್ರತಿಭಟನೆ:ಸ್ಪೀಕರ್‌ ವಿರುದ್ಧ ಬಿಜೆಪಿ,ರಾಜ್ಯಪಾಲರ ವಿರುದ್ಧ ಮೈತ್ರಿ ಆಕ್ರೋಶ

10:53 AM Jul 11, 2019 | Vishnu Das |

ಬೆಂಗಳೂರು : 13 ಅತೃಪ್ತ ಶಾಸಕರು ರಾಜೀನಾಮೆ ನೀಡಿ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಿದ ಬೆನ್ನಲ್ಲೇ ರಾಜ್ಯ ರಾಜಧಾನಿಯಲ್ಲಿ ಆಡಳಿತ ಪಕ್ಷಗಳು ಮತ್ತು ಪ್ರತಿಪಕ್ಷದ ಪ್ರತಿಭಟನೆ ತೀವ್ರವಾಗಿದೆ.

Advertisement

ಬಿಜೆಪಿ ಜನಪ್ರತಿನಿಧಿನಗಳು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ದರು. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ವಿರುದ್ಧ ಆಕ್ರೋಶ ಹೊರ ಹಾಕಿದರು. ಸಂವಿಧಾನವಿರೋಧಿ ಧೋರಣೆ ತೋರದೆ ತಕ್ಷಣ ರಾಜೀನಾಮೆಗಳನ್ನು ಅಂಗೀಕರಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಸ್ಪೀಕರ್‌ ಅವರನ್ನು ಮಧ್ಯಾಹ್ನ ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಈ ಸರ್ಕಾರವನ್ನುವಜಾ ಮಾಡಲು ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ತಿಳಿಸಿದರು.

Advertisement

ಕಾಂಗ್ರೆಸ್‌-ಜೆಡಿಎಸ್‌ ಬೃಹತ್‌ ಪ್ರತಿಭಟನೆ; ರಾಜಭವನ ಚಲೋ
ಬಿಜೆಪಿ ವಿರುದ್ಧ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಯಡಿಯೂರಪ್ಪ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಕಚೇರಿಗೂ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಮಲ್ಲಿಕಾರ್ಜುನ ಖರ್ಗೆ ಮೊದಲಾದ ನಾಯಕರು ರಾಜಭವನ ಚಲೋ ನಡೆಸಲು ನಿರ್ಧರಿಸಿದ್ದಾರೆಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next