Advertisement

BJP; ವಿಪಕ್ಷ ನಾಯಕನ ಆಯ್ಕೆ:ಮಹತ್ವದ ಸಭೆಗೆ ಯತ್ನಾಳ್ ಸೇರಿ ಐವರು ಶಾಸಕರು ಗೈರು

07:51 PM Nov 17, 2023 | Team Udayavani |

ಬೆಂಗಳೂರು : ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್‌ನಲ್ಲಿ ಶುಕ್ರವಾರ ಸಂಜೆ ನಡೆಸಲಾಗುತ್ತಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಮಾಡುವ ಮುನ್ನ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂದಿದೆ.

Advertisement

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೀಕ್ಷಕರಾಗಿ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,  ದುಷ್ಯಂತ್ ಕುಮಾರ್ , ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಕೋಟಾ ಶ್ರೀನಿವಾಸ್ ಪೂಜಾರಿ ಅವರು ವೇದಿಕೆಯ ಮೇಲೆ ಹಾಜರಿದ್ದರು.

ಐವರು ಶಾಸಕರು ಗೈರು
ಮಹತ್ವದ ಶಾಸಕಾಂಗ ಸಭೆಗೆ ಐವರು ಬಿಜೆಪಿ ಶಾಸಕರು ಗೈರಾಗಿದ್ದರು. ಬಿಜೆಪಿ ಹಿರಿಯ ನಾಯಕ ಬಸನ ಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೂ ಮುನ್ನ ಹೊರ ನಡೆದಿದ್ದು, ಅವರೊಂದಿಗೆ ಶಾಸಕ ರಮೇಶ್ ಜಾರಕಿಹೊಳಿ ಯೂ ಕಾರಿನಲ್ಲಿ ತೆರಳಿದ್ದಾರೆ. ಇನ್ನುಳಿದಂತೆ ಶಾಸಕ ಎಸ್.ಟಿ. ಸೋಮಶೇಖರ್ ಅವರು ಗೈರಾಗಿ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಬಾಲಚಂದ್ರ ಜಾರಕಿಹೊಳಿ ಮತ್ತು ಶಿವರಾಂ ಹೆಬ್ಬಾರ್ ಕೂಡ ಗೈರಾಗಿದ್ದಾರೆ.

ಸಭೆಗೆಂದು ಆಗಮಿಸಿದ್ದ ಯತ್ನಾಳ್ ಅವರು ಆರಂಭಕ್ಕೂ ಮುನ್ನ ಹೊರ ಬಂದು ”ಇದು ಬಡವರು ಚಹಾ ಕುಡಿಯುವ ಜಾಗ ಅಲ್ಲ. ಚಹಾ ಕುಡಿಯಲು ಹೋಗುತ್ತಿದ್ದೇವೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿ ರಮೇಶ್ ಜಾರಕಿಹೊಳಿ ಅವರೊಂದಿಗೆ ತೆರಳಿದ್ದಾರೆ.

”ನ ದೈನ್ಯಂ, ನ ಪಲಾಯನಂ… ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಸರಳವಾಗಿ ಸವಾಲುಗಳು.” ಎಂದು ಸಭೆ ಬಹಿಷ್ಕರಿಸಿದ ಬೆನ್ನಲ್ಲೇ ಯತ್ನಾಳ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next