Advertisement

ಧರ್ಮದ್ರೋಹಿ ಬಿಜೆಪಿಯಿಂದ ಹಿಜಾಬ್,ಹಲಾಲ್ ನಿಷೇಧದ ಭಜನೆ: ದಿನೇಶ್ ಗುಂಡೂರಾವ್

11:56 AM Mar 30, 2022 | Team Udayavani |

ಬೆಂಗಳೂರು : ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ‌ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಾಬ್,ಹಲಾಲ್,ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ, ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿರುವ ಅವರು, ‘ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ. ಹಾಗಾಗಿ ಮುಗ್ದ ಜನರಿಗೆ ಧರ್ಮದ ಕಣ್ಕಾಪು ಕಟ್ಟಿ ಮೂರ್ಖರನ್ನಾಗಿಸುತ್ತಿದೆ. ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.

‘ಈ ಸರ್ಕಾರದಲ್ಲಿ 40% ಕಮಿಷನ್ ದಂಧೆ ನಿರಂತರವಾಗಿ ನಡೆಯುತ್ತಿದೆ. ಸಚಿವ ಈಶ್ವರಪ್ಪ ಕಮೀಷನ್ ಕೇಳಿದ ಬಗ್ಗೆ ಗುತ್ತಿಗೆದಾರರೊಬ್ಬರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಆದರೂ ಈಶ್ವರಪ್ಪ ವಿರುದ್ಧ ಯಾವುದೇ ಕ್ರಮವಿಲ್ಲ. ಸಂಪುಟದಲ್ಲಿ ಲಂಚಕೋರರ ಗುಂಪೇ ಇದೆ. ಕಮಿಷನ್ ದಂಧೆಯ ವಿಚಾರ ಮರೆಮಾಚಲು ಈ ಸರ್ಕಾರ ಧರ್ಮದ ಅಸ್ತ್ರ ಬಳಸಿ ನಾಟಕವಾಡುತ್ತಿದೆ’ ಎಂದು ಬರೆದಿದ್ದಾರೆ.

‘ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಜಿಎಸ್ ಟಿ ಪಾಲು ಸಿಕ್ಕಿಲ್ಲ. ಇತ್ತ ರಾಜ್ಯ 15 ಸಾವಿರ ಕೋಟಿ ರಾಜಸ್ವ ಕೊರತೆಯಲ್ಲಿದೆ. ಈ ಸರ್ಕಾರಕ್ಕೆ ಈ ವಿಚಾರಗಳು ಅಪ್ರಸ್ತುತವಾಗಿರುವುದು ದುರಂತ. ಕೇಂದ್ರದಿಂದ ಜಿಎಸ್ ಟಿ ಪಾಲು ಕೇಳಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲ. ಆದರೆ ಸದಾಕಾಲ ಧರ್ಮ ದೇವರು ಎಂದೇಳಿಕೊಂಡು ಕಲಹ ಸೃಷ್ಟಿಸಿ ರಾಜಕಾರಣ ಮಾಡುತ್ತಿದೆ’ ಎಂದು ಆಕ್ರೋಶ ಹಾಕಿದ್ದಾರೆ.

‘ಭಗವದ್ಗೀತೆ,ಬೈಬಲ್,ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ. ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ. ಗ್ರಂಥಗಳ ಸಾರ ಗೊತ್ತಿಲ್ಲದ ಬಿಜೆಪಿಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ. ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು’ ಎಂದು ಆರೋಪ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next