Advertisement

“ಮಹಾ” ಸರ್ಕಾರ ಬಿಕ್ಕಟ್ಟು; ನಾಗ್ಪುರಕ್ಕೆ ದೌಡಾಯಿಸಿದ ಫಡ್ನವೀಸ್, ಭಾಗವತ್ ಜತೆ ಚರ್ಚೆ

10:03 AM Nov 07, 2019 | Team Udayavani |

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಗ್ಗಂಟು ಮುಂದುವರಿದಿರುವ ನಡುವೆಯೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಗ್ಪುರ್ ಕ್ಕೆ ತೆರಳಿದ್ದು, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆಂಬ ವರದಿಗಳು ಹರಿದಾಡುತ್ತಿದೆ.

Advertisement

ಭಾಗವತ್ ಅವರ ಜತೆ ಫಡ್ನವೀಸ್ ಅವರು ಖಾಸಗಿ ಮಾತುಕತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಮಂಗಳವಾರ ತಡರಾತ್ರಿ ಫಡ್ನವೀಸ್ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಆಗಮಿಸಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ವರದಿ ಹೇಳಿದೆ.

ಮಹಾರಾಷ್ಟ್ರದಲ್ಲಿ ಶೀಘ್ರವೇ ಸರ್ಕಾರ ರಚನೆಯಾಗಲಿದ್ದು, ಫಡ್ನವೀಸ್ ಅವರು ಸಿಎಂ ಆಗಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಘೋಷಣೆ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next