Advertisement

ಅತೃಪ್ತರಿಗೆ ಮನವರಿಕೆಗೆ ಬಿಜೆಪಿ ಒತ್ತು

01:23 AM Jul 26, 2019 | Sriram |

ಬೆಂಗಳೂರು: ಪುಣೆಯಲ್ಲಿ ವಾಸ್ತವ್ಯ ಮುಂದುವರಿಸಿರುವ ಕಾಂಗ್ರೆಸ್‌, ಜೆಡಿಎಸ್‌ನ ಅತೃಪ್ತ ಶಾಸಕರಿಗೆ ಕಾನೂನು ತಜ್ಞರಿಂದ ಮಾಹಿತಿ ಒದಗಿಸುವ ಮೂಲಕ ಒಗ್ಗಟ್ಟು ಕಾಯ್ದುಕೊಳ್ಳುವಂತೆ ಮಾಡುವ ಕಾರ್ಯಕ್ಕೆ ಬಿಜೆಪಿ ಒತ್ತು ನೀಡಿದಂತಿದೆ.

Advertisement

ಈಗಾಗಲೇ ಪುಣೆಯಲ್ಲಿನ ಅತೃಪ್ತ ಶಾಸಕರ ಸಂಪರ್ಕದಲ್ಲಿರುವ ಮಾಜಿ ಡಿಸಿಎಂ ಆರ್‌.ಅಶೋಕ್‌, ಶಾಸಕ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಗುರುವಾರವೂ ಪುಣೆಯಲ್ಲೇ ವಾಸ್ತವ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ. ಪಕ್ಷೇತರ ಸೇರಿದಂತೆ ಕಾಂಗ್ರೆಸ್‌ನ ಇಬ್ಬರು ಶಾಸಕರನ್ನು ಸ್ಪೀಕರ್‌ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರು ವಿಚಲಿತರಾಗದಂತೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮುಂದುವರಿದಿದೆ. ಜತೆಗೆ, ಕಾನೂನಿನಾತ್ಮಕ ಕಾರ್ಯಕ್ರಮಗಳ ಬಗ್ಗೆಯೂ ನಿಯಮಿತವಾಗಿ ತಜ್ಞರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next