Advertisement

ಬಿಜೆಪಿಯ ಸ್ಥಾಪನಾ ದಿನ : ಪಣಜಿಯ ಬಿಜೆಪಿ ಕಚೇರಿಯಲ್ಲಿ ಸತ್ಯನಾರಾಯಣ ವೃತ

05:12 PM Apr 06, 2022 | Team Udayavani |

ಪಣಜಿ: ಇಂದು ಬಿಜೆಪಿಯ 42ನೆ ಸ್ಥಾಪನೆಯ ದಿನದ ಅಂಗವಾಗಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರವರು ಪಕ್ಷದ ಎಲ್ಲ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿರವರು ಕೂಡ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.

Advertisement

ಬಿಜೆಪಿ ಸ್ಥಾಪನೆಯ ದಿನದ ಅಂಗವಾಗಿ ಪಣಜಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಪಾಲ್ಗೊಂಡು ಸುದ್ಧಿಗಾರರೊಂದಿಗೆ ಮಾತನಾಡಿದರು.    ನಮ್ಮ ಕಾರ್ಯಕರ್ತರು ಎಲ್ಲರೂ ತಮ್ಮ ಮನೆಯ ಮುಂದೆ ಬಿಜೆಪಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಮ್ಮ ಸರ್ಕಾರದ ಯೋಜನೆಗಳನ್ನು ರಾಜ್ಯದ ಎಲ್ಲ ವರ್ಗದ ಜನತೆಗೂ ತಲುಪಿಸುವ ಕಾರ್ಯವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

ಶೀಘ್ರದಲ್ಲಿಯೇ ಮಾಸ್ಕ್ ಮುಕ್ತ ರಾಜ್ಯ

ಗೋವಾ ರಾಜ್ಯವು ಶೀಘ್ರದಲ್ಲಿಯೇ ಮಾಸ್ಕ್ ಮುಕ್ತ ರಾಜ್ಯವಾಗಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದ್ದಾರೆ.

ಕೋವಿಡ್ ಪ್ರಕರಣಗಳ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಗೋವಾ ರಾಜ್ಯವನ್ನು ಮಾಸ್ಕ್ ನಿಂದ ಮುಕ್ತಗೊಳಿಸಲಾಗುತ್ತದೆಯೇ..? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳು ಈ ಕುರಿತು ಅಧಿಸೂಚನೆ ಹೊರಡಿಸಲಿದ್ದಾರೆ. ಶೀಘ್ರದಲ್ಲಿ ಗೋವಾ ರಾಜ್ಯ ಮಾಸ್ಕ್ ಮುಕ್ತ ರಾಜ್ಯವಾಗಲಿದೆ ಎಂದರು.

Advertisement

ಕಳೆದ 24 ಗಂಟೆಗಳಲ್ಲಿ ಗೋವಾ ರಾಜ್ಯದಲ್ಲಿ ಕೇವಲ 4 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಸದ್ಯ ಕರೋನಾ ಸಕ್ರೀಯ ಪ್ರಕರಣಗಳ ಸಂಖ್ಯೆ 41 ಕ್ಕೆ ಇಳಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next