Advertisement

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

03:37 PM Jan 16, 2022 | Team Udayavani |

ಹೊಸದಿಲ್ಲಿ: ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ ಮತ್ತು ನಿರುದ್ಯೋಗಕ್ಕೂ ಕಾರಣವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

Advertisement

ಆನ್‌ಲೈನ್ ರಸಪ್ರಶ್ನೆಯನ್ನು ಹಾಕುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ಈ ಟ್ವೀಟ್ ಮಾಡಿದ್ದಾರೆ.

“ಬಿಜೆಪಿಯ ದ್ವೇಷದ ರಾಜಕೀಯವು ದೇಶಕ್ಕೆ ತುಂಬಾ ಹಾನಿಕಾರಕವಾಗಿದೆ ಎಂದು ನಾನು ನಂಬುತ್ತೇನೆ. ಮತ್ತು ಈ ದ್ವೇಷವೂ ನಿರುದ್ಯೋಗಕ್ಕೆ ಕಾರಣವಾಗಿದೆ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ಸಮಾಜದಲ್ಲಿ ಶಾಂತಿಯಿಲ್ಲದೆ ದೇಶೀಯ ಮತ್ತು ವಿದೇಶಿ ಕೈಗಾರಿಕೆಗಳು ನಡೆಯಲು ಸಾಧ್ಯವಿಲ್ಲ. ಪ್ರತಿದಿನ ನಿಮ್ಮ ಸುತ್ತ ಬೆಳೆಯುತ್ತಿರುವ ಈ ದ್ವೇಷವನ್ನು ಸಹೋದರತ್ವದಿಂದ ಸೋಲಿಸುತ್ತೀರಾ. ನೀವು ನನ್ನೊಂದಿಗೆ ಇದ್ದೀರಾ? #ನೋ ಹೇಟ್ ” ಎಂಬ ಹ್ಯಾಶ್ ಟ್ಯಾಗ್ ಸೇರಿಸಿದ್ದಾರೆ.

ಕಾಂಗ್ರೆಸ್ ನಾಯಕ ಶನಿವಾರ ಆನ್‌ಲೈನ್ ರಸಪ್ರಶ್ನೆಯಲ್ಲಿ , ಬಿಜೆಪಿ ಸರ್ಕಾರದ “ದೊಡ್ಡ ನ್ಯೂನತೆಯ” ಬಗ್ಗೆ ಜನರನ್ನು ಕೇಳಿ ನಾಲ್ಕು ಆಯ್ಕೆಗಳನ್ನು ನೀಡಿದ್ದರು. ಅವರು ನೀಡಿದ ಆಯ್ಕೆಗಳೆಂದರೆ ನಿರುದ್ಯೋಗ, ತೆರಿಗೆ ಸುಲಿಗೆ, ಬೆಲೆ ಏರಿಕೆ ಮತ್ತು ದ್ವೇಷದ ವಾತಾವರಣ.

Advertisement
Advertisement

Udayavani is now on Telegram. Click here to join our channel and stay updated with the latest news.

Next