Advertisement

ಆಗಸ್ಟ್ ನಲ್ಲಿ ಬಿಜೆಪಿ ಸಂಘಟನಾತ್ಮಕ ಬದಲಾವಣೆ ಪಕ್ಕಾ

01:55 PM Jul 15, 2022 | Team Udayavani |

ಬೆಂಗಳೂರು : ಚುನಾವಣಾ ಸಮಯ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ‌ ಬಿಜೆಪಿಯಲ್ಲಿ ಸಂಘಟನಾತ್ಮಕ ಬದಲಾವಣೆ ನಿಶ್ಚಿತವಾಗಿದ್ದು, ಆಗಷ್ಟ್ ತಿಂಗಳಲ್ಲಿ ರಾಜ್ಯಾಧ್ಯಕ್ಷರನ್ನು ಒಳಗೊಂಡಂತೆ ಮಹತ್ತರ ಬದಲಾವಣೆಯಾಗಲಿದೆ.

Advertisement

ಚುನಾವಣಾ ವರ್ಷದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ನಿರ್ಧರಿಸಲಾಗಿದೆ. ರಾಜ್ಯಾಧ್ಯಕ್ಷರು, ಉಪಾಧ್ಯಕ್ಷರಿಗಳು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರ ಬದಲಾವಣೆಯಾಗಲಿದೆ.

ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಆಗಷ್ಟ್ ನಲ್ಲಿ‌ ಮುಕ್ತಾಯಗೊಳ್ಳಲಿದೆ. ಅವರ ಜಾಗಕ್ಕೆ ಬೇರೆ ನೇಮಕವಾಗಲಿದ್ದು, ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಬೇಕೆಂಬ ಬೇಡಿಕೆಯೂ ಇದೆ.

ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಲ್ವರ ಹೆಸರು ಕೇಳಿ ಬರುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಅರವಿಂದ್ ಲಿಂಬಾವಳಿ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಜಾತಿ ಹಾಗೂ ಪ್ರಾದೇಶಿಕ ಸಮೀಕರಣವೇ ಈ ವಿಚಾರದಲ್ಲಿ ಮುಖ್ಯವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next