Advertisement

ಸಿಎಂ ಬದಲಾವಣೆಯೇ ಬಿಜೆಪಿ ಸಾಧನೆ: ಪ್ರಿಯಾಂಕ್‌

11:56 AM Nov 09, 2021 | Team Udayavani |

ಚಿತ್ತಾಪುರ: ರಾಜ್ಯ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕ ಹಾಗೂ ಕಲಬುರಗಿ ಎಂದರೇ ಅಲರ್ಜಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೇ ಬರೀ ಮುಖ್ಯಮಂತ್ರಿಗಳ ಬದಲಾವಣೆಯಲ್ಲಿಯೇ ಇರುತ್ತಾರೆ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.

Advertisement

ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ 3.66 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿ ಅಂದರೇ ಏನೂ ಅಂತ್ತಲೇ ಗೋತ್ತಿಲ್ಲ. ಕೆಲವು ವರ್ಷಗಳ ಹಿಂದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮೂವರು ಸಿಎಂಗಳನ್ನು ನೋಡಿದ್ದೇವೆ. ಇದೀಗ ಎರಡುವರೆ ವರ್ಷದ ಅಧಿಕಾರವಧಿಯಲ್ಲಿ ಇಬ್ಬರು ಸಿಎಂಗಳನ್ನು ಬದಲಾವಣೆ ಮಾಡಿದ್ದೆ ಬಿಜೆಪಿಯ ದೊಡ್ಡ ಸಾಧನೆಯಾಗಿದೆ ಎಂದರು.

ಚಿತ್ತಾಪುರ ಮತಕ್ಷೇತ್ರದ ಗ್ರಾಮಗಳಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ. ವಾಡಿ ಪಟ್ಟಣದಲ್ಲಿ ಬಡ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಎಜುಕೇಷನ್‌ ಹಬ್‌ ನಿರ್ಮಾಣವಾಗಲಿದೆ. ಮಾಡಬೂಳ ಗ್ರಾಮದ ಬಳಿ 100 ಕೋಟಿ ರೂ. ವೆಚ್ಚದಲ್ಲಿ ಪ್ರಾಣಿ ಸಂಗ್ರಹಾಲಯ ನಿರ್ಮಾಣಗೊಳ್ಳಲಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಮಾಜಿ ಅಧ್ಯಕ್ಷ ರಮೇಶ ಮರಗೋಳ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಶಂಭುಲಿಂಗ ಗುಂಡಗುರ್ತಿ, ಗುಂಡಗುರ್ತಿ ಗ್ರಾಪಂ ಮಾಜಿ ಅಧ್ಯಕ್ಷ ಸುನೀಲ್‌ ದೊಡ್ಮನಿ, ಮಹೇಶ ಕಂಟಿ ಬೆಳಗುಂಪಾ, ಮುಖಂಡರಾದ ಶಿವು ಸಾಹುಕಾರ, ಮಾಣಿಕ್‌ ಸಂಗನ್‌, ರವಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next