Advertisement

ಕಬ್ಬು ಹೋರಾಟದಲ್ಲಿ ಬಿಜೆಪಿಯಿಂದ ರಾಜಕಾರಣ: ಎಚ್‌.ಕೆ. ಪಾಟೀಲ್‌ 

06:10 AM Nov 24, 2018 | Team Udayavani |

ಬಾಗಲಕೋಟೆ: ಕಬ್ಬು ಬೆಳೆಗಾರರ ಹೋರಾಟದ ವಿಷಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿನಾಕಾರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಆರೋಪಿಸಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ಪ್ರಾಮಾಣಿಕ ರಾಜಕಾರಣಕ್ಕಿಂತ ಅನವಶ್ಯಕ ರಾಜಕಾರಣ ಹೆಚ್ಚಾಗುತ್ತಿದೆ. ಮೊದಲು ಅವರನ್ನು ರಾಜಕೀಯದಲ್ಲಿ ಸೋಲಿಸುತ್ತೇವೆ. ಠೇವಣಿ ಜಪ್ತಿ ಮಾಡಿಸುತ್ತೇವೆ ಎಂದು ರಾಜಕಾರಣಿಗಳು ಹೇಳುತ್ತಿದ್ದರು. ಈಗ ಅವರನ್ನು ಮುಗಿಸಿ ಬಿಡುತ್ತೇವೆ, ಸರ್ವನಾಶ ಮಾಡುತ್ತೇವೆ ಎಂಬ ಹೇಳಿಕೆಗಳು ಬರುತ್ತಿವೆ. ಇದು ರಾಜಕಾರಣದಲ್ಲಿ ಒಳ್ಳೆಯದಲ್ಲ ಎಂದರು. 

ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಪಕ್ಷ ಸೈಡ್‌ಲೈನ್‌ ಆಗಿಲ್ಲ. ಹಾಗಂತ ಕೆಲವರು ತಿಳಿದುಕೊಂಡಿರುವುದು ನಿಜ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಪಕ್ಷ ಉತ್ತಮವಾಗಿ ಕೆಲಸ ಮಾಡುತ್ತಿದೆ. ಹೀಗಾಗಿಯೇ ಈಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅದ್ಭುತಪೂರ್ವ ಗೆಲುವು ಸಾಧಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next