Advertisement

ಬಿಜೆಪಿಯದು ಸಾಧನಾ ಸಮಾವೇಶ; ವ್ಯಕ್ತಿ ಪೂಜೆ ಅಲ್ಲ: ರೇಣುಕಾಚಾರ್ಯ

09:44 PM Jul 17, 2022 | Team Udayavani |

ಹೊನ್ನಾಳಿ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷವಾಗುತ್ತಿದ್ದು, ನಾವು ಜನರಿಗೆ ರಾಜ್ಯ ಸರ್ಕಾರದ ಸಾಧನೆ ತಿಳಿಸಲು ಸಾಧನಾ ಸಮಾವೇಶ ಮಾಡುತ್ತಿದ್ದೇವೆ. ಇದು ವ್ಯಕ್ತಿ ಪೂಜೆಯಲ್ಲ, ಬಿಜೆಪಿ ಪೂಜೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರು ಯಾವ ಉತ್ಸವ ಮಾಡುತ್ತಾರೋ ಅವರಿಗೆ ಬಿಟ್ಟ ವಿಷಯ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಡ್ರೆಸ್ಸೇ ಇಲ್ಲ. ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಸಂಘರ್ಷ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷದ ಕೆಲವರು ತಾವೇ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಮುಳುಗಿದ ಹಡಗಿಗೆ ನಾವಿಕನೇ ಇಲ್ಲ.

ಭ್ರಮಾಲೋಕದಲ್ಲಿರುವ ಕಾಂಗ್ರೆಸ್‌ ಇನ್ನು 20ರಿಂದ 25 ವರ್ಷ ಪ್ರತಿಪಕ್ಷ ಸ್ಥಾನದಲ್ಲಿರುತ್ತದೆ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯಲ್ಲಿ ಯಾವುದೇ ಕಾರಣಕ್ಕೂ ಅಡೆjಸ್ಟ್‌ಮೆಂಟ್‌ ಪಾಲಿಟಿಕ್ಸ್‌ ನಡೆಯುವುದಿಲ್ಲ. ಕೆಲವು ಸಚಿವರು ವಿಧಾನಸೌಧದ ಮೂರನೇ ಮಹಡಿಗೆ, ಇನ್ನು ಕೆಲವರು ಕ್ಷೇತ್ರಕ್ಕೆ ಸೀಮಿತರಾಗಿ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ.

ಅಂತಹವರಿಗೆ ಆರೆಸ್ಸೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಕಿವಿಮಾತು ಹೇಳಿದ್ದರಲ್ಲಿ ತಪ್ಪೇನಿಲ್ಲ. ಅವರು ಮಾರ್ಗದರ್ಶನ ಮಾಡಬಹುದಲ್ಲವೇ? ಯಾರ್ಯಾರು ಸೀನಿಯರ್‌ ಮಿನಿಸ್ಟರ್‌ ಇದ್ದಾರೋ ಅವರು ಸಚಿವ ಸ್ಥಾನ ತ್ಯಾಗ ಮಾಡಬೇಕೆಂದು ಈ ಹಿಂದೆ ಹೇಳಿದ್ದೆ. ಆದರೆ ಅವರು ಖುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ನನಗೂ ಸಚಿವನಾಗಲು ಅರ್ಹತೆ ಇದೆ. ಸಚಿವನಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ. ಯಡಿಯೂರಪ್ಪನವರು ತಮ್ಮ ಸ್ಥಾನವನ್ನು ತ್ಯಾಗ ಮಾಡಲಿಲ್ವಾ, ಅವರಂತೆ ಎಲ್ಲರಿಗೂ ತ್ಯಾಗ ಮನೋಭಾವ ಇರಬೇಕು ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next