Advertisement

ರಾಜ್ಯ ರಾಜಕೀಯ ಬೆಳವಣಿಗೆ ಮೇಲೆ ಬಿಜೆಪಿ ನಿಗಾ

07:00 AM Jul 04, 2019 | Team Udayavani |

ಬೆಂಗಳೂರು: ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಸಿದ್ಧತೆ ನಡೆಸಿರುವ ಬಿಜೆಪಿ ಇನ್ನೊಂದೆಡೆ, ರಾಜ್ಯ ರಾಜಕೀಯ ಬೆಳವಣಿಗೆಯನ್ನೂ ಸೂಕ್ಷ್ಮವಾಗಿ ಗಮನಿಸುತ್ತಾ ಎಚ್ಚರಿಕೆ ಹೆಜ್ಜೆ ಇಡುವತ್ತ ಚಿತ್ತ ಹರಿಸಿದೆ. ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌, ಜೆಡಿಎಸ್‌ನ ಹಲವು ಅತೃಪ್ತ ಶಾಸಕರ ರಾಜೀನಾಮೆ ಸರಣಿ ಶುರುವಾಗಲಿದೆ ಎಂಬ ಮಾತು ದಟ್ಟವಾಗಿ ಕೇಳಿ ಬಂದಿತ್ತು. ಆದರೆ ಆ ರೀತಿಯ ಯಾವುದೇ ಬೆಳವಣಿಗೆಗಳು ಈವರೆಗೆ ನಡೆದಿಲ್ಲ.

Advertisement

ಹಾಗಾಗಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯ ಚಟುವಟಿಕೆಗಳನ್ನು ರೂಪಿಸಲು ಆದ್ಯತೆ ನೀಡಿದೆ. ಮೈತ್ರಿ ಸರ್ಕಾರ ಸದ್ಯದಲ್ಲೇ ಪತನವಾಗಲಿದೆ ಎಂದು ಪಕ್ಷದ ಕೆಲ ನಾಯಕರು ಹೇಳಿಕೆ ನೀಡುತ್ತಿರುವ ಬಗ್ಗೆಯೂ ಅಪಸ್ವರ ಕೇಳಿ ಬಂದಿದೆ. ಈ ರೀತಿಯ ಹೇಳಿಕೆಗಳಿಂದ ಪಕ್ಷ ಮತ್ತೆ ಆಪರೇಷನ್‌ ಕಮಲ ನಡೆಸುತ್ತಿದೆ ಎಂಬ ಅಪಖ್ಯಾತಿಗೆ ಗುರಿಯಾಗಲಿದೆ. ಈ ಬಗ್ಗೆ ಹಿರಿಯ ನಾಯಕರು ಗಮನ ಹರಿಸಬೇಕು ಎಂಬ ಒತ್ತಾಯವೂ ಇದೆ. ಹಾಗಾಗಿ ಶಾಸಕರ ರಾಜೀನಾಮೆ ಬೆಳವಣಿಗೆಯಿಂದ ಸದ್ಯದ ಮಟ್ಟಿಗೆ ಅಂತರ ಕಾಯ್ದುಕೊಳ್ಳುವತ್ತ ಪ್ರಮುಖರು ಚಿಂತಿಸಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next