Advertisement

Telangana; ಕೆಸಿಆರ್,ರೇವಂತ್ ರೆಡ್ಡಿಯವರಿಗೆ ಸೋಲುಣಿಸಿದ ವೆಂಕಟರಮಣ!

07:27 PM Dec 03, 2023 | Team Udayavani |

ಹೈದರಾಬಾದ್: ತೆಲಂಗಾಣದ ಕುತೂಹಲ ಮೂಡಿಸಿದ್ದ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ, ಬಿಆರ್‌ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಮತ್ತು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಸೋಲಿಸುವ ಮೂಲಕ ಬಿಜೆಪಿಯ ಕೆ. ವೆಂಕಟ ರಮಣ ರೆಡ್ಡಿ ಅವರು ಜೈಂಟ್ ಕಿಲ್ಲರ್ ಆಗಿ ಹೊರಹೊಮ್ಮಿದ್ದಾರೆ.

Advertisement

ವೆಂಕಟ ರಮಣ ರೆಡ್ಡಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕೆಸಿಆರ್ ಅವರನ್ನು 6,741 ಮತಗಳ ಅಂತರದಿಂದ ಸೋಲಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ವೆಂಕಟ ರಮಣ ರೆಡ್ಡಿ, ಈ ಭಾಗದಲ್ಲಿ ದೊಡ್ಡ ನಾಯಕರು ಸ್ಪರ್ಧಿಸಿದ್ದರಿಂದ ಅವರಿಗೆ ಮನ್ನಣೆ ಸಿಕ್ಕಿದೆ. ಇಬ್ಬರ ವಿರುದ್ಧ ಗೆದ್ದಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ. ಹಣ, ಮದ್ಯ ಇಲ್ಲದಿದ್ದರೂ ಜನ ನಿಮಗೆ ಮತ ಹಾಕುತ್ತಾರೆ. ಜನರು ಭ್ರಷ್ಟರಲ್ಲ, ನಾಯಕರು ಎಂದು ನಾನು ಯಾವಾಗಲೂ ನಂಬುತ್ತೇನೆ. ಕೆಸಿಆರ್ ಮತ್ತು ರೇವಂತ್ ರೆಡ್ಡಿ ಇಬ್ಬರನ್ನೂ ಎದುರಾಳಿಗಳೆಂದು ಪರಿಗಣಿಸಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next