Advertisement

ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ

03:50 PM May 29, 2022 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬೇರು ಮಟ್ಟದಲ್ಲಿ ಬಲಿಷ್ಠವಾಗಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯನ್ನು ಬಿಜೆಪಿಯ ಗಂಡುಮೆಟ್ಟಿನ ನೆಲವಾಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

Advertisement

ನಗರದ ಬಿವಿವಿ ಸಂಘದ ನೂತನ ಸಭಾ ಭವನದಲ್ಲಿ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರದ ಪೂರ್ವಭಾವಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಜನಪರ ಆಡಳಿತ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು. ದೇಶದ ಜನರ ಕಲ್ಯಾಣಕ್ಕಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಧಾನಿಯವರು ಹಾಕಿದ್ದು ಅವುಗಳು ಅನುಷ್ಠಾನಕ್ಕೆ ಕೂಡ ಬಂದಿದೆ. ತಮ್ಮದೇ ಆದ ವಿಶೇಷ ಆಡಳಿತದಂದ ಜಗತ್ತು ಮೆಚ್ಚಿದ ನಾಯಕನಾಗಿ ಮೋದಿಯವರು ಹೊರಹೊಮ್ಮುತ್ತಿದ್ದು ಮೋದಿಯವರ ಆಡಳಿತ ಮೆಚ್ಚಿ ಮತದಾರರು, ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯ ಅರುಣ ಶಹಾಪುರ, ಹನಮಂತ ನಿರಾಣಿಯವರು ಗೆಲ್ಲುತ್ತಾರೆ ಎಂದರು.

ಜಿಲ್ಲೆಯ ಬಿಜೆಪಿಯ ಗಂಡುಮೆಟ್ಟಿನ ಜಿಲ್ಲೆಯಾಗಿದ್ದು ಬಾಗಲಕೋಟೆ ಮತಕ್ಷೇತ್ರದ ಶಾಸಕ ವೀರಣ್ಣ ಚರಂತಿಮಠವರು ಕ್ರಿಯಾಶೀಲರಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಅವರು ಕೂಡ ಕೆಲಸ ಮಾಡುತ್ತಿದ್ದು ರಾಜ್ಯಾಧ್ಯಕ್ಷರು ಹಾಕಿಕೊಟ್ಟ ಕಾರ್ಯಕ್ರಮಗಳನ್ನು ಜಿಲ್ಲಾಧ್ಯಕ್ಷರಾದಿಯಾಗಿ ಎಲ್ಲ ಪದಾಧಿಕಾರಿಗಳು ಸಂಘಟನೆಯಲ್ಲಿ ತೊಡಗಿಕೊಂಡಿದ್ದರಿಂದ ಬಿಜೆಪಿ ಗಟ್ಟಿಯಾಗಿದೆ ಎಂದು ಹೇಳಿದರು.

ಶಾಸಕ ಡಾ| ವೀರಣ್ಣ ಚರಂತಿ ಮಠ ಮಾತನಾಡಿ, ಬಿಜೆಪಿಯ ಅಭ್ಯರ್ಥಿಗಳಾದ ಅರುಣ ಶಹಾಪುರ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಇನ್ನೂ ಪದವೀಧರರ ಸಮಸ್ಯೆಗಳನ್ನು ಅರಿತುಕೊಂಡುಅವುಗಳಿಗೆ ಪರಿಹಾರ ಕಂಡುಕೊಳ್ಳಲು ಕೆಲಸ ಮಾಡಿದ ಹನಮಂತ ನಿರಾಣಿಯವರು ಪುನರಾಯ್ಕೆಯಾಗುವುದು ನಿಶ್ಚಿತ ಎಂದರು.

Advertisement

ಪದವೀಧರರು ಹಾಗೂ ಶಿಕ್ಷಕರು ಮತ ಚಲಾಯಿಸುವಾಗ ಜಾಗೃತಿಯಿಂದ ಮತ ಹಾಕಬೇಕು. ಗ್ರಾಮೀಣ ಮತ್ತು ನಗರ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಎಲ್ಲೆಲ್ಲಿ ಬೂತ್‌ಗಳನ್ನು ಮಾಡಿರುತ್ತಾರೆ ಅಲ್ಲಿಗೆ ಮತದಾರರನ್ನು ಕರೆದುಕೊಂಡು ಹೋಗಿ ಮತ ಹಾಕಲು ಕೆಲಸ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳೇ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಮಾತನಾಡಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರತಿ ಕಾರ್ಯಕರ್ತರು ಪರಿಶ್ರಮ ಹಾಕಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಇರುವ ಮತದಾರನ್ನು ಪಕ್ಷದ ಕಾರ್ಯಕರ್ತರು ಭೇಟಿಯಾಗಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಬೇಕು ಎಂದು ಕೋರಿದರು.

ಶಿಕ್ಷಕರ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಅರುಣ್‌ ಶಹಾಪುರ, ಪದವೀಧರರ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಹಣಮಂತ ನಿರಾಣಿಯವರು ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಪರಿಷತ್‌ನಲ್ಲಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಹೀಗಾಗಿ ಅವರ ಗೆಲುವು ನಿಶ್ಚಿತ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಬಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಬಿಟಿಡಿಎ ಮಾಜಿ ಸಭಾಪತಿ ಜಿ.ಎನ್‌.ಪಾಟೀಲ, ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಬಾಗಲಕೋಟೆ ಕ್ಷೇತ್ರದ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಕೊಣ್ಣೂರ, ಮುದೇನೂರ, ಬಿಟಿಡಿಎ ಸದಸ್ಯ ಶಿವಾನಂದ ಟವಳಿ, ಸಂಗಣ್ಣ ಕಲಾದಗಿ, ನಗರ ಮಂಡಲ ಮಾಧ್ಯಮ ಸಂಚಾಲಕ ರಾಜು ಗಾಣಿಗೇರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next