Advertisement

ಬಿಜೆಪಿ ಗೆಲುವು ನಿಶ್ಚಿತ: ಸಂಸದ ಕಟೀಲು

09:37 PM May 27, 2019 | Team Udayavani |

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಾಗೆ ಸುಳ್ಯ ನ.ಪಂ. ಚುನಾವಣೆಯಲ್ಲೂ ಬಹುಮತದಿಂದ ಗೆಲುವು ಪಡೆಯುವುದು ನಿಶ್ಚಿತ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರದ ಅಭಿವೃದ್ಧಿಗೋಸ್ಕರ ಪ್ರಣಾಳಿಕೆ ಸಿದ್ಧಪಡಿಸಿದ್ದು, ಅದರಂತೆ ಪ್ರಗತಿ ಯೋಜನೆ ಅನುಷ್ಠಾನಿಸಲಾಗುವುದು. ಹತ್ತಾರು ಯೋಜನೆಗಳನ್ನು ಶಾಸಕರ ನೆರವಿನೊಂದಿಗೆ ಅನುಷ್ಠಾನಕ್ಕೆ ಪ್ರಯತ್ನ ನಡೆಸಲಾಗುವುದು. ಕೇಂದ್ರ ಸರಕಾರವು ನಗರದ ಅಭಿವೃದ್ಧಿಗಾಗಿ ರೂಪಿಸಿರುವ ಯೋಜನೆ ಗಳನ್ನು ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು. ನಗರದಲ್ಲಿ ಕುಡಿಯುವ ನೀರು ಪೂರೈಕೆ, ಒಳಚರಂಡಿ, ತ್ಯಾಜ್ಯ ವಿಲೇ ವಾರಿ, ವಿದ್ಯುತ್‌ ಸಮಸ್ಯೆ ಬಗೆಹರಿಸುವಿಕೆ ಮೊದಲಾದ ಪ್ರಮುಖ ಸಮಸ್ಯೆ ಗಳ ಪರಿಹಾರಕ್ಕೆ ಬಿಜೆಪಿ ಬದ್ಧವಾಗಿದೆ ಎಂದರು.

Advertisement

ಶಾಸಕ ಎಸ್‌. ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್‌ ವಳಲಂಬೆ, ಜಿಲ್ಲಾ ಪಂಚಾಯತ್‌ ಸದಸ್ಯರಾದ ಪುಷ್ಪಾವತಿ ಬಾಳಿಲ, ಹರೀಶ್‌ ಕಂಜಿಪಿಲಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next