Advertisement

Karnataka Polls: ಶೆಟ್ಟರ್ ರಾಜೀನಾಮೆ ವಿಚಾರಕ್ಕೆ ಬಿಎಲ್ ಸಂತೋಷ್ ದಿವ್ಯ ಮೌನ

12:28 PM Apr 16, 2023 | Team Udayavani |

ಕಾವೂರು (ಮಂಗಳೂರು): ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಪಕ್ಷ ತೊರೆಯುವ ನಿರ್ಧಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ದಿವ್ಯಮೌನ ತಾಳಿದ್ದಾರೆ. ಶೆಟ್ಟರ್ ರಾಜೀನಾಮೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಸಂತೋಷ್ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದರು.

Advertisement

ಕಾವೂರಿನಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಗೆ ಭೇಟಿ ನೀಡಿದ ಅವರು, ಸ್ಥಳೀಯ ಶಾಸಕ, ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಜತೆ ಮಾತುಕತೆ ನಡೆಸಿದರು. ಅಲ್ಲದೆ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ವಿನ ಪ್ರಗತಿ ಸಾಧಿಸಲಿದೆ ಕಾದು ನೋಡಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next