Advertisement

ಚಿತ್ರಕಲಾ ಪರಿಷತ್‌ ಅಧ್ಯಕ್ಷರಾಗಿ ಬಿ.ಎಲ್‌.ಶಂಕರ್‌ ಆಯ್ಕೆ

01:34 AM Jun 11, 2019 | Team Udayavani |

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷರಾಗಿ ಡಾ.ಬಿ.ಎಲ್‌.ಶಂಕರ್‌ ನಾಲ್ಕನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂ.16 ರಂದು ಚುನಾವಣೆ ನಿಗದಿಯಾಗಿದ್ದು, ಜೂ.10 ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿತ್ತು.

Advertisement

ಆದರೆ, ಬೇರಾರೂ ನಾಮಪತ್ರ ಸಲ್ಲಿಸದ ಕಾರಣ, ಚುನಾವಣಾಧಿಕಾರಿ ಪಿ. ಮುನಿರಾಜು ಅವರು ಬಿ.ಎಲ್‌.ಶಂಕರ್‌ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದ್ದಾರೆ. ಚಿತ್ರಕಲಾ ಪರಿಷತ್‌ ಅಧ್ಯಕ್ಷರ ಅವಧಿ ಎರಡು ವರ್ಷಗಳಾಗಿದ್ದು, ಈ ಹಿಂದೆ ವಿಧಾನ ಪರಿಷತ್‌ ಮಾಜಿ ಸಭಾಧ್ಯಕ್ಷರಾಗಿದ್ದ ವೈಕುಂಠ ಬಾಳಿಗಾ, ಕೆ.ಎಸ್‌.ನಾಗರತ್ನಮ್ಮ, ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಎಸ್‌.ಎಂ.ಕೃಷ್ಣ ಹಾಗೂ ಮಾಜಿ ಸಚಿವ ಜೀವರಾಜ್‌ ಆಳ್ವ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಚಿತ್ರಕಲಾ ಪರಿಷತ್‌, ಮ್ಯೂಜಿಯಂ, ಪ್ರದರ್ಶನ ಗ್ಯಾಲರಿ, ಚಿತ್ರಕಲಾ ಮಹಾವಿದ್ಯಾಲಯ, ಸಂಶೋಧನಾ ವಿಭಾಗ ಹೊಂದಿದೆ. ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಸಂಜೆ ಕಾಲೇಜನ್ನೂ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next