Advertisement

ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಕರಾಳ ದಿನ

06:00 AM May 24, 2018 | Team Udayavani |

ಬೆಂಗಳೂರು: ಜನರ ತೀರ್ಪಿಗೆ ವಿರುದ್ಧವಾಗಿ ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚನೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಬುಧವಾರ ಕರಾಳ ದಿನಾಚರಣೆ ಆಚರಿಸಿದರು. ಬಿಜೆಪಿ ಕಚೇರಿಗಳ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ತೋಳು ಮತ್ತು ಹಣೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಜೆಡಿಎಸ್‌ ಮತ್ತು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಬೆಂಗಳೂರಿನ ಮೌರ್ಯ ವೃತ್ತದ ಬಳಿಯ ಗಾಂಧಿ ಪ್ರತಿಮೆ ಎದುರು ಯಡಿಯೂರಪ್ಪ ನೇತೃತ್ವದಲ್ಲಿ “ಜನಮತ ವಿರೋಧಿ ದಿನ’ ಆಚರಿಸಲಾಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, “”ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಅಧಿಕಾರ ದಾಹದಿಂದ ಸಮ್ಮಿಶ್ರ ಸರ್ಕಾರ ರಚನೆ ಮಾಡಿವೆ. ಹಾಗಂತ ನಾವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ರೈತರ ಸಾಲಮನ್ನಾ ಮಾಡದೇ ಇದ್ದರೆ ರಾಜ್ಯಾದ್ಯಂತ ಪ್ರವಾಸ ಮಾಡಿ, ರೈತರ ಜತೆಗೂಡಿ ಹೋರಾಟ ನಡೆಸುತ್ತೇವೆ. ರಾಜ್ಯ ಬಂದ್‌ ಮಾಡಿ ಸರ್ಕಾರಕ್ಕೆ ಎಚ್ಚರಿಸುತ್ತೇನೆ” ಎಂದು ಗುಡುಗಿದರು.

ಇದೇ ವೇಳೆ, ಶಿವಮೊಗ್ಗ, ಮಂಗಳೂರು, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಲಿ ಪ್ರತಿಭಟನೆಗಳು ನಡೆದವು.

Advertisement

Udayavani is now on Telegram. Click here to join our channel and stay updated with the latest news.

Next