Advertisement

ಮೋದಿ ವಿರುದ್ಧ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

01:41 AM Feb 06, 2019 | Team Udayavani |

ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಹಾಗೂ ಕಳಸಾ-ಬಂಡೂರಿ ಅನುಷ್ಠಾನ ಕುರಿತು ನಿಲುವು ಸ್ಪಷ್ಟಪಡಿಸದಿದ್ದರೆ ಫೆ.10ರಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತ ಸಂಘ, ಹಸಿರು ಸೇನೆ ಸೇರಿ ಸುಮಾರು 300 ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಉತ್ತರ ಕರ್ನಾಟಕದಲ್ಲಿ ಎಲ್ಲೆಲ್ಲಿ ಭೇಟಿ ನೀಡುತ್ತಾರೆಯೋ ಅಲ್ಲೆಲ್ಲ ಪ್ರತಿಭಟನೆ ನಡೆಸಲಾಗುವುದು. ಮೋದಿ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಲು ಆಸಕ್ತಿ ತೋರದೇ 2 ಹೆಕ್ಟೇರ್‌ ಭೂಮಿ ಹೊಂದಿದ ರೈತರ ಖಾತೆಗಳಿಗೆ 6000 ರೂ. ಹಾಕಲು ಮುಂದಾಗಿದ್ದಾರೆ. 1 ಎಕರೆಯಲ್ಲಿ ಸಾಗುವಳಿ ಮಾಡಲು ರೈತರಿಗೆ 5 ಸಾವಿರ ರೂ. ವೆಚ್ಚ ತಗಲುತ್ತದೆ. ಆದ್ದರಿಂದ ರೈತರು ಕೇಂದ್ರ ಸರಕಾರ ನೀಡುವ ಹಣ ತಿರಸ್ಕರಿಸಬೇಕೆಂದು ರೈತರಿಗೆ ಅರಿವು ಮೂಡಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next