Advertisement
ಸದನದಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮಾತನಾಡಿ, “ಕೇಂದ್ರ ಸರ್ಕಾರ 1685 ಕೋಟಿ ರೂ.ಪರಿಹಾರ ಮೊತ್ತವನ್ನು ಡಿಸೆಂಬರ್ನಲ್ಲೇ ಬಿಡುಗಡೆ ಮಾಡಿದ್ದು, ಆರು ತಿಂಗಳಾದರೂ ಪರಿಹಾರ ವಿತರಿಸದಿರುವುದು ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತದೆ. ಬ್ಯಾಂಕ್ ಖಾತೆ ಖಾತರಿಪಡಿಸಿಕೊಳ್ಳಲು, ಆಧಾರ್ ಕಾರ್ಡ್ ಲಿಂಕ್ ಮಾಡಲು ಆರು ತಿಂಗಳು ಬೇಕೆ. ನೀವು ಅಧಿಕಾರಿಗಳಿಗೆ ಛೀಮಾರಿ ಹಾಕಿ ನಿಮ್ಮ ಭಾಷೆಯಲ್ಲಿ ಎಚ್ಚರಿಕೆ ನೀಡಿ. ಕಾಲಮಿತಿಯೊಳಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಟಿ.ಎ.ಶರವಣ, ಬಾಕಿ ಉಳಿದ ರೈತರಿಗೆ ಬರ ಪರಿಹಾರ ವಿತರಿಸಲು ಕಾಲಮಿತಿ ನಿಗದಿಪಡಿಸಲಾಗಿದೆಯೇ ಎಂದು ಪ್ರಶ್ನಿಸಿದರು.
Advertisement
ಅಧಿಕಾರಿಗಳಿಗೆ ಛೀಮಾರಿ ಹಾಕಿ: ಈಶ್ವರಪ್ಪ
11:25 AM Jun 15, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.