Advertisement

ಸ್ಫೋಟ ಪ್ರಕರಣ: ಸ್ಟೇಷನ್‌ ಮಾಸ್ಟರ್‌, ಆರ್‌ಪಿಎಫ್ ನ ಎಎಸ್‌ಐ ಅಮಾನತು

09:48 AM Oct 27, 2019 | Team Udayavani |

ಹುಬ್ಬಳ್ಳಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಟೇಷನ್‌ ಮಾಸ್ಟರ್‌ ಮತ್ತು ಆರ್‌ಪಿಎಫ್‌ ಎಎಸ್‌ಐ ಅವರನ್ನು ಅಮಾನತು ಮಾಡಲಾಗಿದೆ ಎಂದು ರೈಲ್ವೇ ಖಾತೆ ಸಹಾಯಕ ಸಚಿವ ಸುರೇಶ್‌ ಅಂಗಡಿ ಹೇಳಿದರು.

Advertisement

ಶನಿವಾರ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದ ಅನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಘಟನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸ್ಟೇಷನ್‌ ವ್ಯವಸ್ಥಾಪಕ ವರುಣಕುಮಾರ್‌ ದಾಸ್‌ ಮತ್ತು ಆರ್‌ಪಿಎಫ್‌ ಎಎಸ್‌ಐ ಮಂಜುನಾಥ ಕಾಮತ್‌ ಅವರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಮೂರು ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.

ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರೈಲು ನಿಲ್ದಾಣಗಳಲ್ಲಿ ಹೆಚ್ಚು ಭದ್ರತೆ ಒದಗಿಸಲಾಗುವುದು. ಹೆಚ್ಚು ಸಿಸಿ ಕೆಮರಾ ಅಳವಡಿಸಲಾಗುವುದು. ವಿಮಾನ ನಿಲ್ದಾಣದ ಮಾದರಿಯಂತೆ ಹುಬ್ಬಳ್ಳಿ ಸಹಿತ ಅವಶ್ಯವಿರುವ ರೈಲು ನಿಲ್ದಾಣಗಳಲ್ಲಿಯೂ ವಸ್ತುಗಳ ತಪಾಸಣೆಯ ಸ್ಕಾÂನಿಂಗ್‌ ಯಂತ್ರಗಳನ್ನು ಅಳವಡಿಸಲಾಗುವುದು. ರೈಲು ನಿಲ್ದಾಣದಲ್ಲಿ ಅನಧಿಕೃತ ವೆಂಡರ್ ಮತ್ತು ಅನುಮಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅಂಥವರ ಮೇಲೆ ಕ್ರಮ ಕೈಗೊಳ್ಳಲು ಅ ಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ರೈಲ್ವೇ ಇಲಾಖೆಯನ್ನು ಖಾಸಗೀಕರಣಗೊಳಿಸುವುದಿಲ್ಲ. ಆದರೆ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕಾರ್ಪೊರೈಸೇಶನ್‌ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next