Advertisement

ಹಿಮಪಾತ: ಐದು ದಿನಗಳಿಂದ ಯೋಧ ನಾಪತ್ತೆ

10:02 AM Jan 15, 2020 | Mithun PG |

ನವದೆಹಲಿ: ದೈನಂದಿನ ಗಸ್ತು ತಿರುಗುತ್ತಿದ್ದ ವೇಳೆ ಹಿಮದಲ್ಲಿ ಸಿಲುಕಿ 11 ಗರ್ವಾಲ್ ರೈಫಲ್ಸ್ ರೆಜಿಮೆಂಟ್ ಗೆ ಸೇರಿದ ಯೋಧನೊಬ್ಬ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾನೆ.

Advertisement

ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ಹವಾಲ್ದಾರ್ ರಾಜೇಂದ್ರ ಸಿಂಗ್ ನೇಗಿ ಎಂಬ ಯೋಧ ಹಿಮದಲ್ಲಿ ಸಿಲುಕಿದ್ದು, ಕಾಣೆಯಾದ ಸೈನಿಕನನ್ನು ಪತ್ತೆಹಚ್ಚಲು ಭಾರತೀಯ ಸೇನೆ  ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

2002 ರಿಂದ ಭಾರತೀಯ ಸೇನೆಯ 11ನೇ ಗರ್ವಾಲ್ ರೈಫಲ್ಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದ ನೇಗಿ, ಮೂಲತಃ ಉತ್ತರಕಾಂಡದ ಡೆಹ್ರಡೂನ್ ನವರು.

ಗುಲ್ ಮಾರ್ಗ್ ಸೆಕ್ಟರ್ ನಲ್ಲಿ ಭಾರೀ ಹಿಮಪಾತವಾಗುತ್ತಿದ್ದು ರಕ್ಷಣಾ ಕಾರ್ಯಕ್ಕೆ ತೊಡಕಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next