Advertisement

ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಬ್ಲಾಕ್‌ ಕಾಂಗ್ರೆಸ್‌ ದೂರು ಸಲ್ಲಿಕೆ

11:33 AM Oct 29, 2017 | |

ಮಹಾನಗರ: ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನಗರ ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಲಾಯಿತು.

Advertisement

ದೂರಿನಲ್ಲಿ ರಮಾನಾಥ ರೈ ಅವರ ಘನತೆ, ಗೌರವ, ವ್ಯಕ್ತಿತ್ವವನ್ನು ಲೆಕ್ಕಿಸದೆ ಅವರ ಬಗ್ಗೆ ಕೀಳು ಅಭಿರುಚಿಯ ಶಬ್ದ ಬಳಕೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸಚಿವರ ಬಗ್ಗೆ ಮಾನಹಾನಿಕರ ಮಾತುಗಳನ್ನು ಸಾರ್ವಜನಿಕವಾಗಿ ಆಡಿದ್ದಾರೆ. ಇಂಥ ಕೀಳು ಮಟ್ಟದ ಭಾಷೆ ಪ್ರಯೋಗ ಮಾಡುವ ಮೂಲಕ ಜನರ ಭಾವನೆಗಳನ್ನು ಅವರು ಕೆರಳಿಸಿದ್ದಾರೆ ಎಂದು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಯೋಗದಲ್ಲಿ ಬ್ಲಾಕ್‌ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next