Advertisement

Govt,. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಸದಸ್ಯರ ಆಯ್ಕೆಗೆ ತಡೆ

11:40 PM Sep 12, 2024 | Team Udayavani |

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗಳಿಗೆ ಅಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಎರಡೂ ಅಧಿಸೂಚನೆಗಳ ಅನುಷ್ಠಾನಕ್ಕೆ ಮುಂದಿನ ಆದೇಶದವರೆಗೆ ತಡೆ ನೀಡಿ ಸರಕಾರ ಅಧಿಸೂಚನೆ ಹೊರಡಿಸಿದೆ.

Advertisement

ರಾಜ್ಯದ ವಿವಿಧ ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅಧಿಸೂಚನೆ ಕುರಿತಂತೆ ಹಲವು ಗಂಭೀರ ಸ್ವರೂಪದ ದೂರುಗಳು ಸ್ವೀಕೃತವಾಗಿರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮೇಲಿನ ಎರಡೂ ಅಧಿಸೂಚನೆಗಳ ಅನುಷ್ಠಾನಕ್ಕೆ ಮುಂದಿನ ಆದೇಶದವರೆಗೂ ತಡೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ| ಶಮ್ಲಾ ಇಕ್ಬಾಲ್‌ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next