Advertisement

ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿ ಮಾದರಿಯಾದ ವಸಿಷ್ಠ ಸಿಂಹ

08:29 AM May 10, 2021 | Team Udayavani |

ಬೆಂಗಳೂರು : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.  ಸಾವಿರಾರು ಸೋಂಕಿತರು ನಿತ್ಯ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಎರಡನೇ ಅಲೆಯಿಂದ ಪಾರಾಗಲು ಜನರು ಇನ್ನಿಲ್ಲದಂತೆ ಪರದಾಡುತ್ತಿದ್ದಾರೆ.

Advertisement

ಇದೇ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಪಡೆದ ಕೆಲವು ತಿಂಗಳು ರಕ್ತ ದಾನಮಾಡುವ ಹಾಗಿಲ್ಲ.  ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಅಭಾವ ಎದುರಾಗುವ ಸಾಧ್ಯತೆ ಇದ್ದು, ರಕ್ತ ನೀಡುವ ಮೊಲದೇ ಮುನ್ನೆಚ್ಚರಿಕೆಯಾಗಿ ರಕ್ತದಾನ ಮಾಡಿ ಎಂದು ಹಲವಾರು ಮಂದಿ ಹೇಳುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ ಕೂಡ ರಕ್ತ ದಾನ ಮಾಡಿದ್ದಾರೆ.

ಈ  ಮೂಲಕವಾಗಿ ಯುವಕರಲ್ಲಿ ರಕ್ತದಾನ ಮಾಡುವಂತೆ ಜಾಗೃತಿ ಮೂಡಿಸಿದ್ದಾರೆ.  ನಿನ್ನೆ ಮೇ 9 ರಂದು ಬೆಂಗಳೂರಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ ಮಾಡಿದ ನಟ ವಸಿಷ್ಠ ಸ್ವತಃ ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಕೋವಿಡ್ ಲಸಿಕೆ ಪಡೆಯುವ ಮುನ್ನ ವಸಿಷ್ಠ ಸಿಂಹ ರಕ್ತ ದಾನ ಮಾಡುವ ಜೊತೆಗೆ, ಎಲ್ಲರಿಗೂ ರಕ್ತದಾನದ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next