Advertisement

ಸರ್ಕಾರಿ ನೌಕರರಿಂದ ರಕ್ತದಾನ ಶಿಬಿರ

04:46 PM Apr 10, 2020 | Suhan S |

ಚಾಮರಾಜನಗರ: ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ನಡೆದ ರಕ್ತದಾನ ಶಿಬಿರದಲ್ಲಿ 27 ಸರ್ಕಾರಿ ನೌಕರರು ರಕ್ತದಾನ ಮಾಡುವ ಮೂಲಕ ಮಾದರಿಯಾದರು.

Advertisement

ರಕ್ತದಾನ ಶಿಬಿರಕ್ಕೆ ಸರ್ಕಾರಿ ನೌಕರರು ಉತ್ಸಾಹದಿಂದ ಪಾಲ್ಗೊಂಡರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ರಕ್ತದಾನ ಶಿಬಿರಕ್ಕೆ ಭೇಟಿ ನೀಡಿ, ರಕ್ತದಾನ ಶಿಬಿರದ ಪ್ರಕ್ರಿಯೆ ವೀಕ್ಷಿಸಿದ ಸಚಿವರು ಅಲ್ಲಿನ ಮಾಹಿತಿ ಪಡೆದರು. ಇದೇ ವೇಳೆ ರಕ್ತದಾನ ಮಾಡಿದ ನೌಕರರಿಗೆ ರಕ್ತನಿಧಿ ಘಟಕದ ಆರೋಗ್ಯ ಸಚಿವರು ಪ್ರಮಾಣಪತ್ರ ವಿತರಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರ ಶೇಖರ್‌, ಡಿಎಚ್‌ಒ ಡಾ.ಎಂ.ಸಿ.ರವಿ, ರಕ್ತನಿಧಿ ಘಟಕದ ಮುಖ್ಯಸ್ಥೆ ಡಾ. ಸುಜಾತಾ, ಆರ್‌. ಸಿ. ಎಚ್‌. ಅಧಿಕಾರಿ ಡಾ. ವಿಶ್ವೇ ಶ್ವರಯ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ವಾರೀಶ್‌, ಉಪಾಧ್ಯಕ್ಷ ಶಿವಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಂದೀಪ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next