Advertisement

ಬಿಜೆಪಿಯಿಂದ ರಕ್ತದಾನ ಶಿಬಿರ

12:36 PM Aug 31, 2020 | Suhan S |

ಕನಕಪುರ: ಕೋವಿಡ್ ಸಂದರ್ಭದಲ್ಲಿ ರಕ್ತದ ಅಭಾವ ತಗ್ಗಿಸಲು ಜಿಲ್ಲಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು ತಿಳಿಸಿದರು.

Advertisement

ತಾಲೂಕಿನ ಹಾರೋಹಳ್ಳಿ ಗ್ರಾಮಾಂತರ ಪ್ರೌಢ ಶಾಲೆ ಆವರಣದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ರಾಷ್ಟ್ರೋತ್ಥಾನ ರಕ್ತ ನಿಧಿ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯುವ ಮೋರ್ಚಾದಿಂದ ಪ್ರತಿ ವರ್ಷ ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿತ್ತು. ಆದರೆ ಈ ವರ್ಷ ಹುತಾತ್ಮ ಸೈನಿಕರ ಸ್ಮರಣೆ ಹಾಗೂ ಕೋವಿಡ್ ಸಂದರ್ಭದಲ್ಲಿ ರಕ್ತದ ಕೊರತೆ ಉಂಟಾಗಬಾರದು ಎನ್ನುವ ದೃಷ್ಟಿ ಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಈಗಾಗಲೇ ಜಿಲ್ಲೆಯ ನಾಲ್ಕು ಕೇತ್ರದಲ್ಲೂ ಆಯೋಜಿಸಿದ್ದ ಶಿಬಿರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು.

ಹಲವಾರು ಉತ್ಸಾಹಿ ಯುವಕರು ರಕ್ತದಾನ ಮಾಡಿದರು. ಜಿಲ್ಲಾ ಎಸ್‌ಸಿ ಮೋರ್ಚಾದ ಅಧ್ಯಕ್ಷ ಎಂ.ಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಮುತ್ತು, ವಾಲೆ ವೆಂಕಟೆಶ್‌, ಗೋವಿಂದ, ತಾಲೂಕು ಒಬಿಸಿ ಅಧ್ಯಕ್ಷ ನಾಗರಾಜು, ಸಮತಾ ಸೈನಿಕ ದಳದ ಅಧ್ಯಕ್ಷ ಗೊಂವಿಂದಯ್ಯ, ನಾಗು, ವೆಂಕಟೇಶ್‌, ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next