Advertisement

2ರಂದು ರಕ್ತದಾನ ಶಿಬಿರ

11:43 AM Jul 31, 2021 | Team Udayavani |

ಹೊನ್ನಾಳಿ: ತಾಲೂಕಿನ ರಾಂಪುರ ಕ್ಷೇತ್ರದ ಶಿವಯೋಗಿ ಹಾಲಸ್ವಾಮೀಜಿ ಸಂಸ್ಥಾನದ ಲಿಂ.ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಆ.2 ರಂದು ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತ ಹೊನ್ನಾಳಿ ಎಂ.ಎಸ್‌.ಶಾಸ್ತ್ರಿ ಹೊಳೆಮಠ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಸ್ವಾಮೀಜಿಯವರ ಭಕ್ತರು, ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಇದೇ ವೇಳೆ ಲಿಂ.ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿಯವರ ಗುರುಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಹೊಟ್ಯಾಪುರದ ಗಿರಿಸಿದ್ದೇಶ್ವರ ಶಿವಚಾರ್ಯಸ್ವಾಮೀಜಿ ಹಾಗೂ ರಾಂಪುರ ಮಹಾ ಸಂಸ್ಥಾನದ ಶಿವಕುಮಾರ ಹಾಲಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೊರೊನಾ ವಿರುದ್ಧ ವ್ಯಾಕ್ಸಿನ್‌ ಹಾಕಿಸಿಕೊಂಡವರು ರಕ್ತದಾನ ಮಾಡಬಾರದು ಎಂದು ಕೆಲವರಲ್ಲಿ ಗೊಂದಲ ಇದೆ.

ಆದರೆ ವ್ಯಾಕ್ಸಿನ್‌ ಹಾಕಿಸಿಕೊಂಡ 14 ದಿನದ ನಂತರ ರಕ್ತದಾನ ಮಾಡಬಹುದು ಎಂದು ಹೇಳಿದರು. ಹೊಸಹಳ್ಳಿ ತಿಪ್ಪೇಶ್‌, ಶಿಂಗಟಗೆರೆ ನಾಗರಾಜಯ್ಯ, ಮೆಡಿಕಲ್‌ ಸ್ಟೋರ್ ಮಾಲೀಕ ಶಿವಾನಂದಸ್ವಾಮಿ, ದೇವರಾಜ್‌, ಶ್ರೀನಿವಾಸ್‌, ಕುರುವ ಮಂಜುನಾಥ್‌ ಇತರರು ಇದ್ದರು.

 

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next