Advertisement

B’luru;ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛತೆ: ಮುಖ್ಯ ಶಿಕ್ಷಕಿ ಬಂಧನ

07:42 PM Dec 23, 2023 | Team Udayavani |

ಬೆಂಗಳೂರು: ಯಶವಂತಪುರದ ಅಂದ್ರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಮಕ್ಕ ಳಿಂದಲೇ ಸ್ವಚ್ಛಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ BEO ಆಂಜಿನಪ್ಪ ನೀಡಿದ ದೂರಿನ ಆಧಾರದ ಮೇಲೆ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬಂಧಿಸಲಾಗಿದೆ. ಸರಕಾರ ಲಕ್ಷ್ಮೀದೇವಮ್ಮ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದೆ.

ಕೆಮಿಕಲ್‌ ಬಾಟಲ್‌ ಮತ್ತು ಬ್ಲೀಚಿಂಗ್‌ ಪೌಡರ್‌ ಹಿಡಿದು ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಘಟನೆ ಬೆನ್ನಲ್ಲೇ ಶಾಲೆ ಮುಂದೆ ಜಮಾಯಿಸಿದ ಪೋಷಕರು ಹಾಗೂ ಸ್ಥಳೀಯರು ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅನೇಕ ದಿನಗಳಿಂದ ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸುತ್ತಿದ್ದಾರೆ. ಈಗ ತಮ್ಮ ಅರಿವಿಗೆ ಬಂದಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದರು.

ವಿಪಕ್ಷ ನಾಯಕ ಆರ್.ಅಶೋಕ ಶಾಲೆಗೆ ಭೇಟಿ ನೀಡಿ ಘಟನೆ ಕುರಿತು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next