Advertisement

Rahul Gandhi ಅವರ ಕೋಲಾರದ ‘ಜೈ ಭಾರತ್’ ಕಾರ್ಯಕ್ರಮಕ್ಕೆ ಮುಹೂರ್ತ ನಿಗದಿ

06:12 PM Apr 08, 2023 | Team Udayavani |

ಬೆಂಗಳೂರು: ಎಪ್ರಿಲ್ 10 ರಂದು ಕೋಲಾರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಇದೀಗ ಎಪ್ರಿಲ್ 16 ರಂದು ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿದ್ದಾರೆ.

Advertisement

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರು ಮಾಡಿದ ಭಾಷಣದಿಂದಾಗಿ ಲೋಕಸಭಾ ಸದಸ್ಯತ್ವ ಅನರ್ಹತೆಗೆ ಕಾರಣವಾದ ಅದೇ ಸ್ಥಳದಲ್ಲಿ ಏಪ್ರಿಲ್ 10 ರಂದು ಜನರನ್ನು ಉದ್ದೇಶಿಸಿ ಮಾತನಾಡಲು ಗಾಂಧಿ ಯೋಜಿಸಿದ್ದರು ಆದರೆ, ವಿಧಾನಸಭೆ ಚುನಾವಣೆ ಸಂಬಂಧಿತ ಕೆಲಸಗಳು ಮತ್ತು ಅಭ್ಯರ್ಥಿಗಳ ಆಯ್ಕೆಯಿಂದಾಗಿ ಪಕ್ಷದ ಮುಖಂಡರು ಇದನ್ನು ಒಂದು ವಾರ ವಿಸ್ತರಿಸುವಂತೆ ಮನವಿ ಮಾಡಿದರು ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

“ಸಾರ್ವಜನಿಕ ಸಭೆಯನ್ನು ಒಂದು ವಾರ ವಿಸ್ತರಿಸುವಂತೆ ನಾವು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇವೆ ಮತ್ತು ಅವರು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಎಪ್ರಿಲ್ 16 ರಂದು ಕೋಲಾರದಲ್ಲಿ ನಡೆಯುವ ‘ಜೈ ಭಾರತ್’ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಮತ್ತು ಎಲ್ಲಾ ಹಿರಿಯ ನಾಯಕರು ಬರುತ್ತಾರೆ ಎಂದರು.

ಲೋಕಸಭೆಯಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿಯವರ ಮೊದಲ ಸಾರ್ವಜನಿಕ ಭಾಷಣ ಇದಾಗಿದೆ. ಏಳು ಲಕ್ಷ ಮತಗಳ ಅಂತರದಿಂದ ಗೆದ್ದಿರುವ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದು ಮಾಡಿರುವುದು ಇಡೀ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಡಿಕೆಶಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next