Advertisement

BMTC bus: ಬಸ್‌ ಚಕ್ರ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು

11:16 AM Jan 09, 2024 | Team Udayavani |

ಬೆಂಗಳೂರು: ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಪಟೂರು ಮೂಲದ ತೇಜಸ್‌(22) ಮೃತ ಸವಾರ. ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ.

Advertisement

ಕೆಲ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿರುವ ತೇಜಸ್‌ ಕಂಪ್ಯೂಟರ್‌ ತರಬೇತಿ ಪಡೆಯುತ್ತಿದ್ದು, ಕೆಂಗೇರಿಯ ಪೇಯಿಂಗ್‌ ಗೆಸ್ಟ್‌ನಲ್ಲಿ ವಾಸವಾಗಿದ್ದರು. ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ಸ್ನೇಹಿತನನ್ನು ಭೇಟಿಯಾಗಲು ಬೈಕ್‌ನಲ್ಲಿ ಉತ್ತರಹಳ್ಳಿ ಕಡೆಗೆ ಹೋಗುತ್ತಿದ್ದ. ಇದೇ ವೇಳೆ ಬಿಎಂಟಿಸಿ ಬಸ್‌ ಚಾಲಕ ಉತ್ತರಹಳ್ಳಿ ಕಡೆ ಹೋಗುತ್ತಿದ್ದ. ಆಗ ಹಿಂದಿನಿಂದ ವೇಗವಾಗಿ ಬಂದ ಬೈಕ್‌ ಸವಾರ ತೇಜಸ್‌, ಮಾರ್ಗ ಮಧ್ಯೆ ಮಂತ್ರಿ ಆನ್‌ಲೈನ್‌ ಅಪಾರ್ಟ್‌ಮೆಂಟ್‌ ಪ್ರವೇಶ ದ್ವಾರದ ಬಳಿ ಬಸ್‌ ಅನ್ನು ಹಿಂದಿಕ್ಕಲು ಮುಂದಾದಾಗ ದ್ವಿಚಕ್ರ ವಾಹನಕ್ಕೆ ಬಸ್‌ ತಗುಲಿದೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ತೇಜಸ್‌ ತಲೆ ಮೇಲೆಯೇ ಬಸ್‌ನ ಚಕ್ರಗಳು ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಬಿಎಂಟಿಸಿ ಬಸ್‌ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಬಸ್‌ ಹಿಂದಿಕ್ಕುವ ಭರದಲ್ಲಿ ಈ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next