Advertisement

BMTC ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಇಬ್ಬರು ಮೃತ್ಯು

09:09 PM Jun 14, 2023 | Team Udayavani |

ಬೆಂಗಳೂರು: ಬಿಎಂಟಿಸಿ ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಲಗ್ಗೆರೆಯ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿ ಬುಧವಾರ ಸಂಜೆ ಸಂಭವಿಸಿದೆ.

Advertisement

ಮೃತ ದುರ್ದೈವಿಗಳ ಪೈಕಿ ಓರ್ವ ನನ್ನು ಸುರೇಶ್​ ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಇಬ್ಬರೂ ಅಂದಾಜು 35 ವರ್ಷ ಪ್ರಾಯದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next