Advertisement

ಬೆಳಗಾವಿ BMW ಅಪಘಾತ : ಬಿಜೆಪಿ ಶಾಸಕನ ಪುತ್ರನ ಬಂಧನ 

11:23 AM Oct 09, 2018 | Team Udayavani |

ಬೆಳಗಾವಿ: ಇಲ್ಲಿನ ಗಾಂಧಿ ನಗರದ ಹಣ್ಣಿನ ಮಾರುಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ  ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಗೋವಾ ಬಿಜೆಪಿ ಶಾಸಕ ಗ್ಲೆನ್‌ ಶಿಕ್ಲಾನ್‌ ಅವರ ಪುತ್ರ ಕೈಲ್‌ ಟಿಕ್ಲೋನನ್ನು  ಮಾಳಮಾರುತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

Advertisement

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಕಾಕತಿ ಕಡೆ ಹೊರಟಿದ್ದ BMW ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಆಝಾದ ನಗರದ ಸೆಹನಿಯತ್‌ ವಾಹೀದ್‌ ಬಿಸಿª (18) ಎಂಬ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಕೆಯ ಸ್ನೇಹಿತೆ ಸಮ್ರಿàನ್‌ ಖಾಲೀದ್‌ ಬಿಸಿª (21) ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ
ದಾಖಲಿಸಲಾಗಿತ್ತು.

ಘಟನೆ ಬಳಿಕ ಉದ್ರಿಕ್ತಗೊಂಡ ಸಾರ್ವಜನಿಕರು ಕಾರಿಗೆ ಕಲ್ಲೆಸೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. 

ಉಜ್ವಲ ನಗರದಿಂದ ರಸ್ತೆ ದಾಟಿ ಆಝಾದ ನಗರಕ್ಕೆ ಒಟ್ಟು ನಾಲ್ವರು ಯುವತಿಯರು ಹೊರಟಿದ್ದರು. ಇಬ್ಬರು ಯುವತಿಯರು ರಸ್ತೆ ದಾಟಿ ಮುಂದಕ್ಕೆ ಹೋಗಿದ್ದರು. ಈ ಇಬ್ಬರು ಸಹೋದರಿಯರು ಹಿಂದೆ ಇದ್ದರು. ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಆಗ ಕಾರಿನ ಚಕ್ರಕ್ಕೆ ಸಿಲುಕಿ ಯುವತಿ ಮೃತಪಟ್ಟಿದ್ದಾಳೆ.

ಅಪಘಾತವಾಗುತ್ತಿದ್ದಂತೆ ಕೂಡಲೇ ಜಮಾಯಿಸಿದ ಸಾರ್ವಜನಿಕರು ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Advertisement

ಹಿಂಭಾಗಕ್ಕೆ ಸ್ವಲ್ಪ ಪ್ರಮಾಣದಲ್ಲಿ ಬೆಂಕಿ ಹಚ್ಚಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಬೆಂಕಿ ನಂದಿಸಿದ್ದಾರೆ. ಬೆಂಕಿ ಹಚ್ಚಿದ ಕೆಲವರನ್ನು ಮಾಳಮಾರುತಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಾತ್ರಿ ಠಾಣೆಗೆ ಬಂದು ಶರಣಾಗಿದ್ದ ಕೈಲ್‌ ಟಿಕ್ಲೋ ತನ್ನ ಮೇಲಾದ ಹಲ್ಲೆಯ ಕುರಿತು ಪ್ರತಿ ದೂರನ್ನೂ ದಾಖಲಿಸಿದ್ದ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next