Advertisement

ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು

03:40 PM May 27, 2022 | Team Udayavani |

ಶ್ರೀರಂಗಪಟ್ಟಣ: ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರು ಶುಕ್ರವಾರ ಪತ್ತೆಯಾಗಿದೆ.

Advertisement

ಕಾರು ನದಿಯಲ್ಲಿ ತೇಲುತ್ತಿರುವುದನ್ನು ಕಂಡ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿ ಕಾರನ್ನು ನದಿಯಿಂದ ಹೊರ ತೆಗೆಸಿ ವಿಚಾರಣೆ ಕೈಗೊಂಡರು. ಈ ವೇಳೆ ಅಚ್ಚರಿ ವಿಚಾರ ಹೊರ ಬಂದಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನದಿಗೆ ಕಾರು‌ ಮುಳುಗಿಸಿದ್ದಾನೆ ಎಂದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಿವಾಸಿ ರೂಪೇಶ್ ಎಂಬಾತ, ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಶ್ರೀರಂಗಪಟ್ಟಣಕ್ಕೆ ಬಂದು ನದಿಯಲ್ಲಿ ಕಾರು ಮುಳುಗಿಸಿ ವಾಪಸ್ ತೆರಳಿದ್ದಾರೆ.

ಇದನ್ನೂ ಓದಿ:ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು 

Advertisement

ಕಾರು ಪತ್ತೆ ಬಳಿಕ ಪೊಲೀಸರು ಪರಿಶೀಲನೆ ನಡೆಸಿ ಕಾರು ಮಾಲೀಕನನ್ನು ಪಟ್ಟಣದ ಠಾಣೆಗೆ ಕರೆದು ತಂದು ವಿಚಾರಿಸಿದ್ದಾರೆ. ಈ ವೇಳೆ ಮಾನಸಿಕ ವ್ಯಕ್ತಿ ಅಸಂಬದ್ದ ಹೇಳಿಕೆ ನೀಡುತ್ತಿದ್ದರಿಂದ ಪೊಲೀಸರು ಕಂಗಾಲಾಗಿದ್ದಾರೆ. ಬಳಿಕ ಸಂಬಂಧಿಕರು ಠಾಣೆಗೆ ಬಂದು ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಬಂಧಿಕರ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ಖುಲಾಸೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next