Advertisement

ಬ್ಯಾಂಕ್‌ ವಿಲೀನ ವಿರೋಧಿಸಿ : ನಾಳೆ ಬ್ಯಾಂಕ್‌ ಮುಷ್ಕರ

09:50 AM Oct 22, 2019 | Team Udayavani |

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನವನ್ನು ವಿರೋಧಿಸಿ ಅಖೀಲ ಭಾರತ ಬ್ಯಾಂಕ್‌ ನೌಕರರ ಸಂಘ ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ನಾಳೆ ಅ. 22ರಂದು ದೇಶಾದ್ಯಂತ ಬ್ಯಾಂಕ್‌ ನೌಕರರು ಇದರಲ್ಲಿ ಭಾಗಿಯಾಗಲಿದ್ದು ಈ ಹಿನ್ನೆಲೆಯಲ್ಲಿ ಬ್ಯಾಂಕ್‌ ವಹಿವಾಟು ನಡೆಯುವುದು ಅನುಮಾನ. ಈ ಅಖೀಲ ಭಾರತ ಬ್ಯಾಂಕ್‌ ನೌಕರರ ಸಂಘದ ಮುಷ್ಕರ ಕರೆಗೆ ಬೆಂಬಲ ನೀಡಿರುವ ವಿವಿಧ ಬ್ಯಾಂಕ್‌ಗಳ ನೌಕರರ ಒಕ್ಕೂಟದ ಸದಸ್ಯರು ಬೀದಿಗಿಳಿದು ಕೇಂದ್ರ ಸರಕಾತರದ ವಿರುದ್ಧ ಪ್ರತಿಭಟಿಸಲಿದ್ದಾರೆ.

Advertisement

ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕುಗಳನ್ನು ವಿಲೀನಗೊಳಿಸಿತ್ತು. ಬ್ಯಾಂಕ್‌ಗಳ ವಿಲೀನ, ವೇತನ ಸಮಸ್ಯೆ, ಉದ್ಯೋಗದಲ್ಲಿನ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ನಾಲ್ಕು ಪ್ರಮುಖ ಬ್ಯಾಂಕಿಂಗ್‌ ಸಿಬಂದಿ ಒಕ್ಕೂಟಗಳು ಬೀದಿಗಿಳಿದಿವೆ.

Advertisement

Udayavani is now on Telegram. Click here to join our channel and stay updated with the latest news.

Next