Advertisement

ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಮಣೆ

12:23 PM May 24, 2019 | Team Udayavani |

ಬೈಲಹೊಂಗಲ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್‌ ರ್ಯಾಲಿ ನಡೆಸಿ, ಗುಲಾಲು ಎರಚಿ, ಸಿಹಿ ಹಂಚಿ ಸಂಭ್ರಮಿಸಿದರು.

Advertisement

ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮೀಣ ಅಧ್ಯಕ್ಷ ಡಾ| ವಿಶ್ವನಾಥ ಪಾಟೀಲ ಮಾತನಾಡಿ, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದ ಜನತೆಯ ಜನಮಾನಸವನ್ನು ಗೆದ್ದಿದ್ದು, ಭ್ರಷ್ಟಾಚಾರ ರಹಿತ ಆಡಳಿತ ನಡೆಸಿ ದಿನ ದಲಿತರ, ರೈತರ, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ. ಅವರ ಆಡಳಿತ ವೈಖರಿ ಮೆಚ್ಚಿ ವಿಶ್ವದ ಅಗ್ರಗಣ್ಯ ನಾಯಕರೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು.

ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ದಿನದ 24ಗಂಟೆಯಲ್ಲಿ 18 ನಿರಂತರವಾಗಿ ದೇಶದ ಅಭಿವೃದ್ಧಿ ಪರ ಚಿಂತನೆ ಮಾಡುವುದು ಅತ್ಯಂತ ಶ್ಲಾಘನೀಯವಾಗಿದೆ. ಮತ್ತೂಮ್ಮೆ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಜನತೆ ಆಶೀರ್ವಾದ ಮಾಡಿರುವುದು ಹರ್ಷದಾಯಕವಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಫಲಿತಾಂಶ ಹೋರಬಿಳುತ್ತಿದ್ದಂತೆ ಮಾಜಿ ಶಾಸಕರುಗಳಾದ ಡಾ| ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಅಭಿಮಾನಿ ಬಳಗ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್‌ ರ್ಯಾಲಿ ನಡೆಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಸುಧೀರ ವಾಲಿ, ಗುರು ಮೆಟಗುಡ್ಡ, ಜಗದೀಶ ಜಂಬಗಿ, ಶಿವಾನಂದ ಕೋಲಕಾರ, ಸಾಗರ ಭಾವಿಮನಿ, ಬ್ಲಾಕ್‌ ಅಧ್ಯಕ್ಷ ಮಡಿವಾಳಪ್ಪ ಹೋಟಿ, ಶಿವಾನಂದ ಬಡ್ಡಿಮನಿ, ಬಸವರಾಜ ನೇಸರಗಿ, ಬಸವರಾಜ ಹಲಸಿ, ಮಲ್ಲಿಕಾರ್ಜುನ ವಕ್ಕುಂದಮಠ, ಮಲ್ಲು ಮತ್ತಿಕೊಪ್ಪ, ಮಾರುತಿ ತಿಗಡಿ, ಮಹೇಶ ಹರಕುಣಿ, ರಾಜು ನರಸನ್ನವರ, ವಿರೇಶ ಹೊಳೆಪ್ಪನವರ, ಕುಮಾರ ಭರಮನ್ನವರ, ಬಸನಗೌಡ ಪಾಟೀಲ, ಉಮೇಶ ಕಾದ್ರೋಳಿ, ಅಶೋಕ ಬೋರಕನವರ, ಅಶೋಕ ಜವಳಿ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next