Advertisement

ಬಂಡೆಗೆ ಬಡಿದು ಬೋಟ್‌ ಮುಳುಗಡೆ : 7 ಮೀನುಗಾರರ ರಕ್ಷಣೆ

10:05 AM May 23, 2023 | Team Udayavani |

ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ದೋಣಿಯೊಂದು ಸೋಮ ವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಟ್ಕಳದ ನೇತ್ರಾಣಿ ಸಮೀಪದಲ್ಲಿ ಬಂಡೆಗೆ ಬಡಿದು ಮುಳುಗಡೆಗೊಂಡಿದೆ. ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಸಮೀಪ ದಲ್ಲಿದ್ದ ಬೋಟಿನವರು ರಕ್ಷಿಸಿದ್ದಾರೆ.

Advertisement

ಉದ್ಯಾವರ ಸಂಪಿಗೆನಗರದ ರಾಹಿಲ್‌ ಅವರಿಗೆ ಸೇರಿದ ಸೀ ಬರ್ಡ್‌ ಬೋಟ್‌ ಮೇ 21ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಮೇ 22ರಂದು ಬೆಳಗ್ಗೆ ಭಟ್ಕಳ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಾಳಿ-ಮಳೆ ಆರಂಭವಾಗಿದ್ದು, ಪರಿಣಾಮ ನಾವಿಕನ ನಿಯಂತ್ರಣ ತಪ್ಪಿ ಕಲ್ಲು ಬಂಡೆಗೆ ಬಡಿಯಿತು. ಈ ವೇಳೆ ನೀರು ಒಳಗೆ ತುಂಬಿ ಬೋಟ್‌ ಮುಳುಗಲಾರಂಭಿಸಿತ್ತು.

ಸಮೀಪದಲ್ಲಿದ್ದ ಪವನ ಪುತ್ರ 111 ಬೋಟಿನವರು ಧಾವಿಸಿ ಬಂದು ಈ ಬೋಟನ್ನು ಹಗ್ಗದ ಸಹಾಯದಿಂದ ಎಳೆದು ತರಲು ಪ್ರಯತ್ನ ಪಟ್ಟರು. ಆಗ ಹಗ್ಗ ತುಂಡಾಗಿ ಬೋಟು ಸಂಪೂರ್ಣ ಮುಳುಗಡೆಗೊಂಡಿತು.

ಬೋಟಿನಲ್ಲಿದ್ದ ಏಳೂ ಮಂದಿಯನ್ನು ರಕ್ಷಿಸಿ ಮಲ್ಪೆ ಬಂದರಿಗೆ ಕರೆ ತರಲಾಗಿದೆ. ಸುಮಾರು 45 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next