Advertisement

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದೋಣಿ ಅವಘಡ: ನಾಲ್ವರು ಸಾವು, ಹಲವರು ನಾಪತ್ತೆ

08:32 AM Oct 27, 2020 | keerthan |

ಕೋಲ್ಕತ್ತಾ: ದುರ್ಗಾ ಪೂಜೆಯ ನಂತರ ಮೂರ್ತಿ ವಿಸರ್ಜನೆಯ ವೇಳೆ ದೋಣಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು, ಹಲವರು ನಾಪತ್ತೆಯಾದ ಘಟನೆ ಪಶ್ಚಿಮ ಬಂಗಾಳ ರಾಜ್ಯದ ಮುರಿಶಾಬಾದ್ ಜಿಲ್ಲೆಯಲ್ಲಿ ನಡೆದಿದೆ.

Advertisement

ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಮೃತರೆಲ್ಲರೂ ಬೆಲ್ಡಾಂಗಾ ಗ್ರಾಮದವರೆಂದು ಗುರುತಿಸಲಾಗಿದೆ. ಮೃತಪಟ್ಟವರನ್ನು ಸುಖೇಂದು ಡೇ (21), ಪಿಕಾನ್ ಪಾಲ್ (23), ಅರಿಂದಮ್ ಬ್ಯಾನರ್ಜಿ (20) ಮತ್ತು ಸೋಮನಾಥ್ ಬ್ಯಾನರ್ಜಿ (22) ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಹುಡುಕು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದುವರೆಗೆ ನಾಲ್ವರ ಶವಗಳನ್ನು ಮೇಲಕ್ಕೆತ್ತಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:ಹಾಡಹಗಲೇ ಗುಂಡಿನ ದಾಳಿ: ಶಿವಸೇನೆ ಮುಖಂಡ ರಾಹುಲ್‌ ಶೆಟ್ಟಿ ಹತ್ಯೆ

ದುರಂತಕ್ಕೆ ಕಾರಣವಾದ ಮುರ್ಷಿದಾಬಾದ್‌ನಲ್ಲಿ ಮೂರ್ತಿ ವಿಸರ್ಜನೆ ನಿರ್ವಹಣೆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next