Advertisement

 ದೋಣಿ ದುರಂತ: 5 ಲಕ್ಷ ರೂ. ಪರಿಹಾರಕ್ಕೆ ಒಪ್ಪಿಗೆ

12:50 AM Jan 25, 2019 | |

ಬೆಂಗಳೂರು: ಕಾರವಾರ ಸಮೀಪದ ಕೊರ್ಮಗಢ ದ್ವೀಪದಲ್ಲಿ ಜ.21 ರಂದು ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳನ್ನು ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಪ್ಪಿದ್ದಾರೆ. ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ದುರಂತದಲ್ಲಿ ಒಟ್ಟು 15 ಜನರು ಮೃತಪಟ್ಟಿದ್ದು, ಇವರ ಕುಟುಂಬಗಳಿಗೆ ಈಗಾಗಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರೆಲ್ಲರೂ ಬಡ ಕುಟುಂಬಗಳಿಗೆ ಸೇರಿದವರಾಗಿದ್ದು ಪರಿಹಾರ ಮೊತ್ತ ಹೆಚ್ಚಿಸಲು ಮನವಿ ಮಾಡಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಜತೆ ಚರ್ಚಿಸಿದ್ದರಿಂದ ತಕ್ಷಣವೇ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Advertisement

ಇದೇ ಸಂದರ್ಭದಲ್ಲಿ ಕೊರ್ಮಗಢ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next