Advertisement

ಚಿತ್ರದುರ್ಗ ಡೀಸಿಯಿಂದ ದೇಹದಾನ ಘೋಷಣೆ

07:00 AM Oct 13, 2017 | Team Udayavani |

ಚಿತ್ರದುರ್ಗ: ಜಿಲ್ಲಾಧಿಕಾರಿ ವಸಿರೆಡ್ಡಿ ವಿಜಯ ಜ್ಯೋತ್ಸಾಹಾಗೂ ಅವರ ಪತಿ ಹರೀಶ್‌ ವಾಸಿರೆಡ್ಡಿ ಅವರು ಮರಣಾ ನಂತರ ದೇಹದಾನ ಮಾಡುವುದಾಗಿ ಘೋಷಿಸಿದ್ದಾರೆ.

Advertisement

ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪುತ್ರ ಆದಿತ್ಯನ ಐದನೇ ವರ್ಷದ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ದಂಪತಿ, ತಮ್ಮ ದೇಹದಾನ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸಾ°, ಮರಣಾನಂತರ ಅಂಗಾಂಗಗಳನ್ನು ದಾನ ಮಾಡುವುದರಿಂದ ಕನಿಷ್ಠ ಎಂಟು ಜನರಿಗೆ ಮರುಜನ್ಮ ನೀಡಬಹುದಾಗಿದೆ. ಮರಣದ ನಂತರ ದೇಹವನ್ನು ಬೆಂಕಿಯಲ್ಲಿ ಸುಡುವುದರ ಬದಲಾಗಿ ಅಂಗಾಂಗಗಳನ್ನು ದಾನ ಮಾಡಬೇಕು ಎಂದು ಮನವಿ ಮಾಡಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ. ವಸ್ತ್ರಮಠ ಹಾಗೂ ವಿವಿಧ ಇಲಾಖೆ ಅ ಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next