Advertisement

Hubli: ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ

12:19 PM Jan 31, 2024 | Team Udayavani |

ಹುಬ್ಬಳ್ಳಿ: ಇಲ್ಲಿನ ಕಾರವಾರ ರಸ್ತೆ ಎಂಟಿಎಸ್ ಕಾಲೋನಿಯ ಖಾಲಿ ಜಾಗದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

Advertisement

ಮೃತರನ್ನು ಹಳೇಹುಬ್ಬಳ್ಳಿ ಹೆಗ್ಗೇರಿ ಮಾರುತಿ ನಗರದ ವಿಜಯ ಸುರೇಶ ಬಸವಾ (26) ಎಂದು ಗುರುತಿಸಲಾಗಿದೆ.

ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ ಮಂಗಳವಾರ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬಂದಿದ್ದ. ನಂತರ ಹೊರಗೆ ಹೋಗಿದ್ದ. ತಡರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ. ಬುಧವಾರ ಬೆಳಗ್ಗೆ ಆತನ ಶವ ಅರೆಬೆಂದ ಸ್ಥಿತಿಯಲ್ಲಿ ಎಂಟಿಎಸ್ ಕಾಲೋನಿ ಪಾಳುಬಿದ್ದ ಜಾಗದಲ್ಲಿ ದೊರೆತಿದೆ. ಯಾರೋ ಆತನನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಆತನ ಸಹೋದರ ವಿಶಾಲ ಬಸವಾ ಹೇಳಿದರು.

ಪ್ರಾಥಮಿಕ ತನಿಖೆಯಿಂದ ಇದು ಕೊಲೆಯೋ – ಆತ್ಮಹತ್ಯೆಯೋ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಮತ್ತು ತನಿಖೆ ನಂತರವೇ ನಿಜಾಂಶ ತಿಳಿಯಲಿದೆ ಎಂದು ಎಸಿಪಿ ವಿಜಯಕುಮಾರ ತಳವಾರ ತಿಳಿಸಿದರು.

ಘಟನಾ ಸ್ಥಳಕ್ಕೆ ಡಿಸಿಪಿ ಸಂಜೀವ ಎಂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಮೃತನ ಕುಟುಂಬಸ್ಥರು, ಸ್ನೇಹಿತರು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next