Advertisement

ಮಹಿಳೆಯ ಅಗಾಂಗ ಕತ್ತರಿಸಿ ಭೀಕರ ಕೊಲೆ: ಹೇಮಾವತಿ ನದಿಯಲ್ಲಿ ಪತ್ತೆಯಾಯ್ತು ಶವ

08:14 AM Nov 19, 2020 | keerthan |

ಮಂಡ್ಯ: ಮಹಿಳೆಯ ಅಂಗಾಂಗಗಳನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆಯಲ್ಲಿ ನಡೆದಿದ್ದು,  ಹೇಮಾವತಿ ನದಿಯಲ್ಲಿ ಕತ್ತರಿಸಲ್ಪಟ್ಟ ಶವ ಪತ್ತೆಯಾಗಿದೆ.

Advertisement

ಹೇಮಾವತಿ ನದಿಯಲ್ಲಿ ಅಪರಿಚಿತ ಯುವತಿಯ ದೇಹ, ತಲೆ ಮತ್ತು ಅಂಗಾಂಗಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ವಿಕೃತವಾಗಿ ಕೊಲೆ ಮಾಡಿ ಅಂಗಾಂಗಗಳನ್ನ ಕತ್ತರಿಸಿ ನದಿಗೆ ಎಸೆದಿದ್ದಾರೆ.

ಬಂಡಿಹೊಳೆ ಗ್ರಾಮದ ಹೇಮಾವತಿ ದಡದಲ್ಲಿರುವ ವಿದ್ಯುತ್ ಸ್ಥಾವರ ಘಟಕದ ಸಮೀಪ ರುಂಡ ಮತ್ತು ದೇಹದ ಅಂಗಾಂಗಗಳು ಪತ್ತೆಯಾಗಿವೆ.

ಎರಡು ದಿನಗಳ ಹಿಂದೆ ಕೃತ್ಯ ನಡೆದಿರುವ ಶಂಕೆ‌ ವ್ಯಕ್ತವಾಗಿದ್ದು, ಮೊದಲು ಸ್ಥಳೀಯರಿಗೆ ದೇಹ ಮಾತ್ರ ಕಂಡು ಬಂದಿದೆ. ನಂತರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ‌ ಶೋಧ ನಡೆಸಿದಾಗ ಉಳಿದ ಅಂಗಾಂಗಗಳು ಪತ್ತೆಯಾಗಿದೆ.

Advertisement

ಘಟನೆಯಿಂದಾಗಿ ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next