Advertisement

ಕತ್ರಾ ಪಟ್ಟಣದ ಶೌಚಾಲಯದಲ್ಲಿ ಯಾತ್ರಿಕನ ಶವ ಪತ್ತೆ

05:08 PM Aug 30, 2018 | Team Udayavani |

ಜಮ್ಮು : ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಪರ್ವತದಲ್ಲಿನ ಮಾತಾ ವೈಷ್ಣೋದೇವಿ ದೇವಾಲಯದ ಕತ್ರಾದಲ್ಲಿನ ಮೂಲ ಶಿಬಿರದ ಸುಲಭ ಶೌಚಾಲಯದಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಮೃತ ವ್ಯಕ್ತಿಯನ್ನು ಅಖನೂರ್‌ ನ ಗುರಾಬ್‌ ಕುಮಾರ್‌ ಎಂದು ಗುರುತಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಶಂಕಾಸ್ಪದ ಸನ್ನಿವೇಶದಲ್ಲಿ ಈ ಸಾವು ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next