Advertisement

ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ: ಹತ್ಯೆ ನಡೆಸಿ ಹೂತಿಟ್ಟ ದುಷ್ಕರ್ಮಿಗಳು

12:09 PM Nov 01, 2020 | keerthan |

ಉಳ್ಳಾಲ: ಇಲ್ಲಿನ ಮೂಳೂರು ಇರಾ ಬಳಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಇಂದು ಶವವಾಗಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಹೂತಿಟ್ಟ ಸ್ಥಿತಿಯಲ್ಲಿ ಶವ ದೊರೆತಿದೆ.

Advertisement

ಪಲ್ಲಿಯಾಕ ಯಾನೆ ಮೋನು ಎಂಬವರ ಮೃತದೇಹ ಮೂಳೂರು ಇರಾ ಸಮೀಪ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಪಲ್ಲಿಯಾಕ ಯಾನೆ ಮೋನು ಅವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಆದರೆ ಇದೀಗ ಇರಾ ಸಮೀಪ ಅವರ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಹೂತಿಡಲಾಗಿದೆ.

ಇದನ್ನೂ ಓದಿ:ಭತ್ತ ಕಟಾವು ಯಂತ್ರಗಳ ದುಬಾರಿ ಬಾಡಿಗೆ ! ಸರಕಾರದ ನಿಯಂತ್ರಣ ಏಕಿಲ್ಲ?

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ಮೇಲ್ನೊಟಕ್ಕೆ ತಿಳಿದು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next