Advertisement

Madikeri: ಕಾಣೆಯಾಗಿದ್ದ ಬಾಲಕನ ಮೃತದೇಹ ಪತ್ತೆ

11:00 PM Apr 18, 2023 | Team Udayavani |

ಮಡಿಕೇರಿ: ಕೇರಳದ ಕಣ್ಣೂರಿನಲ್ಲಿರುವ ಪಯ್ಯಂಬಲ ಕಡಲ ತೀರದಲ್ಲಿ ಕಾಣೆಯಾಗಿದ್ದ ತಣ್ಣೀರುಹಳ್ಳ ಗ್ರಾಮದ ಸೃಜನ್‌ನ ಮೃತದೇಹ ಪತ್ತೆಯಾಗಿದೆ.

Advertisement

ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಮುಗಿದ ಹಿನ್ನೆಲೆ ಕುಟುಂಬದ ಸದಸ್ಯರೊಂದಿಗೆ ಕೇರಳದ ದೇವಾಲಯಗಳು ಹಾಗೂ ಪ್ರವಾಸಿತಾಣಗಳಿಗೆ ತೆರಳಿದ್ದ ತಣ್ಣೀರುಹಳ್ಳ ಗ್ರಾಮದ ನಿವಾಸಿ ಶಶಿಕುಮಾರ್‌ ಅವರ ಪುತ್ರ ಸೃಜನ್‌ (15) ಪಯ್ಯಂಬಲ ಕಡಲ ಕಿನಾರೆಯಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ.

ಕೋಸ್ಟಲ್‌ ಗಾರ್ಡ್‌ ಸಿಬಂದಿ, ನುರಿತ ಈಜುಗಾರರು ಕಾರ್ಯಾಚರಣೆ ಕೈಗೊಂಡಿದ್ದರು. ಸೋಮವಾರ ರಾತ್ರಿ 8.30ರ ಸುಮಾರಿಗೆ ಸೃಜನ್‌ ಮೃತದೇಹ ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next