Advertisement

ರವಿವಾರ ನೇತ್ರಾವತಿ ನದಿಗೆ ಹಾರಿದ್ದ ಯುವಕ: ಪಾಣೆಮಂಗಳೂರು ಸೇತುವೆಯಡಿ ಇಂದು ಮೃತದೇಹ ಪತ್ತೆ

05:26 PM Nov 09, 2020 | keerthan |

ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಬಳಿ ಬ್ಯಾಗನ್ನಿಟ್ಟು ಯುವಕನೋರ್ವ ನದಿಗೆ ಹಾರಿದ ಘಟನೆ ರವಿವಾರ ನಡೆದಿದ್ದು, ಹುಡುಕಾಟದ ನಂತರ ಸೋಮವಾರ ಸಂಜೆ ಪಾಣೆಮಂಗಳೂರು ಹೊಸ ಸೇತುವೆಯ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.

Advertisement

ನದಿಗೆ ಹಾರಿದ ಯುವಕ ಪುತ್ತೂರು ತಾಲೂಕಿನ ಬಲ್ನಾಡು ಕಾಂತಿಲ ನಿವಾಸಿ ಸುಚೇತನ್ (27) ಎಂದು ಸಂಶಯಿಸಲಾಗಿದೆ.

ಈತ ರವಿವಾರ ಮಂಗಳೂರಿನ ಪಿಜಿಯಿಂದ ಬಂದು ಬೆಳಗ್ಗೆ ಪಾಣೆಮಂಗಳೂರು ಹೊಸ ಸೇತುವೆಯ ಬಳಿ ತನ್ನ ಬ್ಯಾಗ್ ಇರಿಸಿ ನದಿಗೆ ಹಾರಿದ್ದು, ಯಾರೋ ಅದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬ್ಯಾಗಿನಲ್ಲಿ ಸಿಕ್ಕ ಆಧಾರ್ ಕಾರ್ಡ್, ವೋಟರ್ ಐಡಿಯ ಆಧಾರದಲ್ಲಿ ಇದೇ ಯುವಕ ನದಿಗೆ ಹಾರಿದ್ದಾನೆ ಎಂದು ಸಂಶಯಿಸಿ ಮನೆಗೆ ಮಾಹಿತಿ ನೀಡಲಾಗಿತ್ತು. ಮನೆಯವರು ಕೂಡ ಆಗಮಿಸಿದ್ದರು.

ಇದನ್ನೂ ಓದಿ:ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಯುವತಿಯ ರಕ್ಷಿಸಲು ಹೋದ ಯುವಕನೂ ನೀರುಪಾಲು; ರಕ್ಷಣೆ

ಬಳಿಕ ರಾತ್ರಿವರೆಗೂ ಬಂಟ್ವಾಳ ಅಗ್ನಿಶಾಮಕ ದಳದವರು, ಸ್ಥಳೀಯ ಈಜುಗಾರರು ಬೋಟಿನ ಮೂಲಕ ಸಂಜೆಯವರೆಗೂ ಹುಡುಕಾಡಿದರೂ, ಯುವಕನ ಪತ್ತೆಯಾಗಿರಲಿಲ್ಲ. ಇಂದು ಕೂಡಾ ಹುಡುಕಾಟ ಮುಂದುವರಿಸಿದ್ದು, ಯುವಕನ ಮೃತದೇಹವು ಪಾಣೆಮಂಗಳೂರು ಹೊಸ ಸೇತುವೆಯ ತಳಭಾಗದಲ್ಲಿ ಪತ್ತೆಯಾಗಿದೆ.

Advertisement

ಬಂಟ್ವಾಳ ಅಗ್ನಿ ಶಾಮಕ ದಳದವರು ಬೋಟಿನಲ್ಲಿ ಹುಡುಕಾಡುವಾಗ ಶವ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next